ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ರುಡ್ ಸೆಟ್ ಸಂಸ್ಥೆ, ಉಜಿರೆಗೆ ಭೇಟಿ
ಉಜಿರೆ: ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಗೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ಬೆಂಗಳೂರು ಇದರ ಮುಖ್ಯ ಕಾರ್ಯಾಚರಣಾ ಅಧಿಕಾರಿ (ಕೌಶಲ್ಯ) ಕಾತ್ಯಾಯಿನಿ ದೇವಿ ಕೆ.ಎ.ಎಸ್ ಅವರು ಇಂದು ಭೇಟಿ ನೀಡಿದರು.ಭೇಟಿಯ ಸಂದರ್ಭದಲ್ಲಿ ಸಂಸ್ಥೆಯಲ್ಲಿ ನಡೆಯುತ್ತಿರುವ ಕಂಪ್ಯೂಟರ್ ಟ್ಯಾಲಿ ಹಾಗೂ ಫ್ರಿಜ್ ಮತ್ತು ಎ.ಸಿ ರಿಪೇರಿ ತರಬೇತಿಗಳನ್ನು ವೀಕ್ಷಿಸಿ, ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು. ತರಬೇತಿಯ ಗುಣಮಟ್ಟ, ಲಭ್ಯವಿರುವ ಸೌಲಭ್ಯಗಳು ಹಾಗೂ ಶಿಬಿರಾರ್ಥಿಗಳ ಅಭಿಪ್ರಾಯಗಳ ಬಗ್ಗೆ ವಿಚಾರಿಸಿದರು.ನಂತರ ಸಂಸ್ಥೆಯ ನಿರ್ದೇಶಕರು ಹಾಗೂ ಉಪನ್ಯಾಸಕರೊಂದಿಗೆ ಚರ್ಚೆ…
