ಜೆಇಇ ಮೈನ್ಸ್ ಬಿ.ಆರ್ಚ್ ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪಿಯು ಕಾಲೇಜು ವಿದ್ಯಾರ್ಥಿ ಸುಜಲ್ ಎಸ್ ತೋಳಾರ್ 98.17ಪರ್ಸoಟೈಲ್ಹೆಮ್ಮಾಡಿ:ಕೇಂದ್ರ ಸರಕಾರದ ಎನ್ ಟಿ ಎ ಪ್ರಾಧಿಕಾರವು ನಡೆಸುವ ರಾಷ್ಟ್ರ ಮಟ್ಟದ ಜೆಇಇ ಮೈನ್ಸ್ 2026ರ ಪ್ರಥಮ ಹಂತದ ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿ ಸುಜನ್ ಎಸ್ ತೋಳಾರ್ 98.17ಪರ್ಸoಟೈಲ್ ಅಂಕ ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
Month: July 2026
ಬ್ರಹ್ಮಾವರದಲ್ಲಿರುವ ಸಿಟಿ ಸೆಂಟರ್ ಹೋಟೆಲ್ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಗುತ್ತಿಗೆದಾರರ ಸಂಘದ ಸಭೆ
ಉಡುಪಿ: ಬ್ರಹ್ಮಾವರದಲ್ಲಿರುವ ಸಿಟಿ ಸೆಂಟರ್ ಹೋಟೆಲ್ ಸಭಾಂಗಣದಲ್ಲಿ ಇಂದು ನಡೆದ ಉಡುಪಿ ಜಿಲ್ಲಾ ಗುತ್ತಿಗೆದಾರರ ಸಂಘದ ಸಭೆಯಲ್ಲಿ ಗುತ್ತಿಗೆದಾರರು ಎದುರಿಸುತ್ತಿರುವ ಬಾಕಿ ಪಾವತಿ ಸಮಸ್ಯೆಗಳ ಕುರಿತು ಚರ್ಚೆ ನಡೆಸಿ ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಯಿತು. ಉಡುಪಿ ಜಿಲ್ಲಾ ಗುತ್ತಿಗೆದಾರರ ಸಂಘಕ್ಕೆ ನೂತನ ಪದಾಧಿಕ್ಕಾರಿಗಳನ್ನು ನೇಮಿಸಲಾಯಿತು . ಈ ಸಂದರ್ಭದಲ್ಲಿ ಶ್ರೀ ಗೋಕುಲ್ ಶೆಟ್ಟಿ ಅವರನ್ನು ಒಮ್ಮತದಿಂದ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದ್ದು, ಉಪಾಧ್ಯಕ್ಷರು ಸೇರಿದಂತೆ ಇತರೆ ಪದಾಧಿಕಾರಿಗಳನ್ನು ಹೊಸದಾಗಿ ನೇಮಕ ಮಾಡಲಾಗಿದೆ. ರಾಜ್ಯದಲ್ಲಿ ಗುತ್ತಿಗೆದಾರರಿಗೆ ಸುಮಾರು ₹37,000 […]
ಎಂಟನೇ ತರಗತಿಯ ಹೊಸ ಪಠ್ಯದಲ್ಲಿ ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ಬಗ್ಗೆ ಉಲ್ಲೇಖ
, ಫೆಬ್ರವರಿ 24: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಸೋಮವಾರ 8 ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪುಸ್ತಕವನ್ನು ಬಿಡುಗಡೆ ಮಾಡಿದೆ. ಹೊಸ ಪುಸ್ತಕವು ನ್ಯಾಯಾಂಗ(Judiciary)ದ ಪಾತ್ರವನ್ನು ವಿವರಿಸುವ, ನ್ಯಾಯಾಂಗದಲ್ಲಿನ ಭ್ರಷ್ಟಾಚಾರ ಮತ್ತು ಬಾಕಿ ಇರುವ ನ್ಯಾಯಾಲಯದ ಪ್ರಕರಣಗಳಂತಹ ಸವಾಲುಗಳನ್ನು ಪರಿಹರಿಸುವ ಹೊಸ ವಿಭಾಗವನ್ನು ಒಳಗೊಂಡಿದೆ. ಈ ವಿಷಯಗಳನ್ನು ಹಳೆಯ ಪುಸ್ತಕದಲ್ಲಿ ನೇರವಾಗಿ ಉಲ್ಲೇಖಿಸದ ಕಾರಣ ಈ ಬದಲಾವಣೆಯು ಮಹತ್ವದ್ದಾಗಿದೆ. ಇಂಡಿಯನ್ ಎಕ್ಸ್ಪ್ರೆಸ್ನ ವರದಿಯ ಪ್ರಕಾರ, ನಮ್ಮ ಸಮಾಜದಲ್ಲಿ ನ್ಯಾಯಾಂಗದ ಪಾತ್ರ […]
ಪಂಚವರ್ಣದ ರೈತರೆಡೆಗೆ ನಮ್ಮನಡಿಗೆ ೫೨ನೇ ಸರಣಿ ಕಾರ್ಯಕ್ರಮಕೃಷಿ ಕಾಯಕದಲ್ಲಿ ಹಿರಿಯ ತಲೆಮಾರಿನ ಕೊಡುಗೆ ಅನನ್ಯ- ಮಣೂರು ಭಾಸ್ಕರ ಶೆಟ್ಟಿ
ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು,ಗೆಳೆಯರ ಬಳಗ ಕಾರ್ಕಡ,ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ರೈತಧ್ವನಿ ಸಂಘ ಕೋಟ,ಸ್ನೇಹಕೂಟ ಮಣೂರು ಇವರುಗಳ ಸಹಯೋಗದೊಂದಿಗೆ ೫೨ನೇ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಹಿರಿಯ ಕೃಷಿಕ ದಾರೋಜ್ಜಿಮನೆ ಆನಂದ ಕಾಂಚನ್ ಇವರಿಗೆ ಕೃಷಿ ಪುರಸ್ಕಾರ ನೀಡಿ ಗೌರವಿಸಲಾಯಿತು. ತೆಕ್ಕಟ್ಟೆ ಪಂಚಾಯತ್ ಮಾಜಿ ಅಧ್ಯಕ್ಷ ಶೇಖರ್ ಕಾಂಚನ್ ಕೊಮೆ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಕೋಟತಟ್ಟು ಪಡುಕರೆಯ ಪ್ರಗತಿಪರ […]
ಬ್ರಹ್ಮಾವರದ ಗಾಂಧೀ ಮೈದಾನದಲ್ಲಿ ಇಂದು ಅಭಿಮತ ಸಂಭ್ರಮ
ಜನಸೇವಾ ಟ್ರಸ್ಟ್ ಗಿಳಿಯಾರು ಆಶ್ರಯದಲ್ಲಿ ಅಭಿಮತ ಸಂಭ್ರಮ ಕಾರ್ಯಕ್ರಮ ಫೆ.14ರಂದು ಸಂಜೆ 6ಗಂಟೆಗೆ ಬ್ರಹ್ಮಾವರ ಗಾಂಧೀ ಮೈದಾನದಲ್ಲಿ ಜರಗಲಿದೆ.ಈ ಪ್ರಯುಕ್ತ ಆರಂಭದಲ್ಲಿ ನೃತ್ಯವಸಂತ ನಾಟ್ಯಾಲಯ ಕುಂದಾಪುರ ಆಶ್ರಯದಲ್ಲಿನೃತ್ಯೋಪಾಸನೆ ಕಾರ್ಯಕ್ರಮ ನಡೆಯಲಿದ್ದು, ಅನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿಮುಂಬೈ ಪೊಲೀಸ್ ಇಲಾಖೆಯ ನಿವೃತ್ತ ಎ.ಸಿ.ಪಿ. ಎಣ್ಣೆಹೊಳೆ ದಯಾ ನಾಯಕ್ ಅವರಿಗೆ ಅಭಿಮತಕೀರ್ತಿ ಕಲಶ ಮಹಾಗೌರವ ನೀಡಿ ಗೌರವಿಸಲಾಗುವುದು ಹಾಗೂ ತುಳು ಜಾನಪದ ವಿದ್ವಾಂಸಬನ್ನಂಜೆ ಬಾಬು ಅಮೀನ್, ಸೂಲಗಿತ್ತಿ ಲಕ್ಷ್ಮೀ ಪೂಜಾರಿ, ಯಶಸ್ವಿ ಕಲಾವೃಂದ ತೆಕ್ಕಟ್ಟೆಸಂಸ್ಥೆಗಳಿಗೆ ಯಶೋಗಾಥೆ ಗೌರವ ನೀಡಿ ಗೌರವಿಸಲಾಗುವುದ. […]
ಅಸ್ತಮಾ ಸಮಸ್ಯೆ: ನಿರಂತರ ಕೆಮ್ಮುತ್ತಿದ್ದ ವ್ಯಕ್ತಿ ಮೇಲೆ ನೆರೆಮನೆಯವರ ಹಲ್ಲೆ, ಸಾವು
ಬೆಂಗಳೂರು: ಅಸ್ತಮಾ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಜೋರಾಗಿ ಕೆಮ್ಮಿದ್ದಕ್ಕೆ ನೆರೆಮನೆಯವರು ಜಗಳಕ್ಕಿಳಿದು ಹಲ್ಲೆ ನಡೆಸಿದ್ದು, ಪರಿಣಾಮ ಉಸಿರಾಟ ಸಮಸ್ಯೆಯಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆಯೊಂದು ಬೆಂಗಳೂರಿನ ಹೊರವಲಯದ ಬಿಡದಿ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ವಿನೋದ್ ಕುಮಾರ್ ಶೈನೀ (34) ಎಂದು ಗುರುತಿಸಲಾಗಿದೆ. ಇವರು ರಾಜಸ್ಥಾನ ಮೂಲದವರಾಗಿದ್ದು, ಬಿಡದಿ ತಾಲೂಕಿನ ಕೆತಗಾನಹಳ್ಳಿ ಗ್ರಾಮದಲ್ಲಿ ವಾಸವಾಗಿದ್ದರು. ಖಾಸಗಿ ಸಾರಿಗೆ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದರು. ಫೆಬ್ರವರಿ 7ರಂದು ಸಂಜೆ ವಿನೋದ್ ಕುಮಾರ್ ಜೋರಾಗಿ ಕೆಮ್ಮುತ್ತಿದ್ದಾಗ ನೆರೆಹೊರೆಯವರು ಜಗಳಕ್ಕೆ ಇಳಿದಿದ್ದಾರೆ. ಮಾತಿನ ಚಕಮಕಿ ವಾಗ್ವಾದವಾಗಿ […]





