IPL ಬ್ರಾಡ್ಕಾಸ್ಟ್ ಇಂಜಿನಿಯರ್ ನಿಧನ ENGಗೆ ಸೇರಿದ IPL ಬ್ರಾಡ್ಕಾಸ್ಟ್ ಇಂಜಿನಿಯರ್ ಜಾನ್ ವಿಲಿಯಂ (76) ನಿಧನರಾಗಿದ್ದಾರೆ. ಇದೆ ತಿಂಗಳ 29ರಂದು MI-KKR ಪಂದ್ಯ ನಂತರ ಅವರು ಹೋಟೆಲ್ಗೆ ತೆರಳಿದ್ದರು. ಮರುದಿನ ಕಾಲ್ ಮಾಡಿದರೂ ಪ್ರತಿಕ್ರಿಯೆ ಇಲ್ಲದ ಕಾರಣ, ಮಾಸ್ಟರ್ ಕೀ ಬಳಸಿ ಬಾಗಿಲು ತೆರೆದಾಗ ಜಾನ್ ನೆಲದ ಮೇಲೆ ಬೈದಿದ್ದರು. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ವೈದ್ಯರು ಅವರು ಮೃತಪಟ್ಟಿದ್ದಾರೆಂದು ತಿಳಿಸಿದ್ದಾರೆ. ಪೋಸ್ಟ್ಮಾರ್ಟಂ ವರದಿಯಲ್ಲಿ ಯಾವುದೇ ಅನುಮಾನಾಸ್ಪದ ಕಂಡುಬಂದಿಲ್ಲ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
Month: July 2026
ಗಮನಿಸಿ.. ಹೀಗಾದರೆ ನಿಮ್ಮ ರೇಷನ್ ಕಾರ್ಡ್ ರದ್ದು!
ಗಮನಿಸಿ.. ಹೀಗಾದರೆ ನಿಮ್ಮ ರೇಷನ್ ಕಾರ್ಡ್ ರದ್ದು! ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಮತ್ತು ಅನರ್ಹ ಫಲಾನುಭವಿಗಳನ್ನು ಪಟ್ಟಿಯಿಂದ ಕೈಬಿಡಲು ಕೇಂದ್ರ ಸರ್ಕಾರವು ತಂತ್ರಜ್ಞಾನ ಆಧಾರಿತ ಹೊಸ ಮಾರ್ಗಸೂಚಿಗಳನ್ನು ಸಿದ್ಧಪಡಿಸಿದೆ. ಅದರಂತೆ ಕುಟುಂಬದ ಸದಸ್ಯರಲ್ಲಿ ಯಾರಾದರೂ ಆದಾಯ ತೆರಿಗೆ ಪಾವತಿಸುತ್ತಿದ್ದರೆ, ಕುಟುಂಬದಲ್ಲಿ ಸ್ವಂತ ನಾಲ್ಕು ಚಕ್ರದ ವಾಹನ (ಟ್ರಾಕ್ಟರ್ ಹೊರತುಪಡಿಸಿ) ಇದ್ದರೆ, ಸತತ ಮೂರು ತಿಂಗಳುಗಳ ಕಾಲ ಪಡಿತರ ಪಡೆಯದಿದ್ದರೆ, ನಿಮಗೆ ಅದರ ಅಗತ್ಯವಿಲ್ಲ ಎಂದು ಪರಿಗಣಿಸಿ ರೇಷನ್ ಕಾರ್ಡ್ ರದ್ದುಪಡಿಸಲಾಗುತ್ತದೆ.
ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ವಿದ್ಯಾರ್ಥಿಗಳಿಗೆ, ಕಾಲೇಜಿನ ರೆಡ್ ಕ್ರಾಸ್ ಸಂಘಟನೆ ವತಿಯಿಂದ ಉಚಿತ ಕಣ್ಣಿನ ತಪಾಸಣೆ
ಬ್ರಹ್ಮಾವರ : ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ವಿದ್ಯಾರ್ಥಿಗಳಿಗೆ, ಕಾಲೇಜಿನ ರೆಡ್ ಕ್ರಾಸ್ ಸಂಘಟನೆ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಪ್ರಸಾದ್ ನೇತ್ರಾಲಯದಿಂದ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಸಾದ್ ನೇತ್ರಾಲಯದ ಕಣ್ಣಿನ ವೈದ್ಯರಾದ ಡಾಕ್ಟರ್ ಆಶ್ರೀತ್ ಸಿದ್ದಣ್ಣ,ವಹಿಸಿದ್ದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಪ್ರತಿಯೊಬ್ಬ ವಿದ್ಯಾರ್ಥಿಯು ಕಣ್ಣಿನ ಬಗ್ಗೆ ಬಹಳಷ್ಟು ಜಾಗ್ರತೆ ವಹಿಸಬೇಕು. ನೋಡುವ ನೋಟವನ್ನು ಒಂದೇ ಕಡೆ ಬಹಳಷ್ಟು ಸಮಯ ದಿಟ್ಟಿಸದೆ, ಪ್ರತಿ 20 […]
ಚಿಕ್ಕಮಗಳೂರಿನ ವ್ಯಕ್ತಿ ಫೇಸ್ಬುಕ್ ಜಾಹೀರಾತು ನಂಬಿ 1.28 ಕೋಟಿ ರೂ ಕಳೆದುಕೊಂಡ
ಚಿಕ್ಕಮಗಳೂರಿನ ವ್ಯಕ್ತಿ ಫೇಸ್ಬುಕ್ ಜಾಹೀರಾತು ನಂಬಿ 1.28 ಕೋಟಿ ರೂ ಕಳೆದುಕೊಂಡಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಶಿವಪುರ ಗ್ರಾಮದ ನಿವಾಸಿ ಕಲ್ಲೇಗೌಡ ಎಂಬುವರಿಗೆ ಖದೀಮರು ಆನ್ಲೈನ್ ಟ್ರೇಡಿಂಗ್ ಇನ್ವೆಸ್ಟ್ಮೆಂಟ್ ಹೆಸರಲ್ಲಿ ಕೋಟ್ಯಂತರ ರೂ ಹಣ ವಂಚಿಸಿದ್ದಾರೆ. ‘FYERS’ ಎಂಬ ಟ್ರೇಡಿಂಗ್ ಜಾಹೀರಾತನ್ನು ಫೇಸ್ಬುಕ್ನಲ್ಲಿ ನೋಡಿದ ಕಲ್ಲೇಗೌಡರು F8-FYERS ಸೆಕ್ಯೂರಿಟೀಸ್ ವಾಟ್ಸಾಪ್ ಗ್ರೂಪ್ ಸೇರಿದ್ದಾರೆಆನ್ಲೈನ್ ಟ್ರೇಡಿಂಗ್ ಇನ್ವೆಸ್ಟ್ಮೆಂಟ್ ಹೆಸರಲ್ಲಿ ಕಲ್ಲೇಗೌಡಗೆ ವಂಚಕರು ಹೆಚ್ಚಿನ ಲಾಭ ಗಳಿಸುವ ಆಸೆ ತೋರಿಸಿದ್ದಾರೆ. ಹಂತ ಹಂತವಾಗಿ 1 ಕೋಟಿ 28 ಲಕ್ಷದ 10 […]
ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಇಫ್ತಾರ್ ಕೂಟ ಆಚರಣೆ
○ ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ವಿದ್ಯಾರ್ಥಿಗಳಿಗೆ ಸ್ನೇಹ ಭಾವ ಹಾಗೂ ಐಕ್ಯತೆಯನ್ನು ಹೆಚ್ಚಿಸುವ ಉದ್ದೇಶದಿಂದ ಇಫ್ತಾರ್ ಕೂಟವನ್ನು ಆಯೋಜಿಸಲಾಗಿತ್ತು.ಈ ಕಾರ್ಯಕ್ರಮದ ಅಧ್ಯಕ್ಷರಾಗಿ ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯರವರು, ವಹಿಸಿದ್ದರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷರಾದ ಶ್ರೀ ಸುಬ್ರಹ್ಮಣ್ಯರವರು ವಿದ್ಯಾರ್ಥಿಗಳನ್ನು ಕುರಿತು “ಇಫ್ತಾರ್ ಕೂಟವೂ ಸಹೋದರತ್ವ, ಪ್ರೀತಿ, ಮತ್ತು ಐಕ್ಯತೆಯ ಸಂಕೇತವಾಗಿದೆ. ಈ ಕಾರ್ಯಕ್ರಮದ ಮೂಲಕ ನಾವು ಪರಸ್ಪರ ಗೌರವ, ಸ್ನೇಹ, ಮತ್ತು ಸಾಮರಸ್ಯವನ್ನು ಬೆಳೆಸಿಕೊಳ್ಳಬಹುದು ಎ0ದರು.ಹಾಗೂ ಇಫ್ತಾರ್ ಕೂಟ […]
ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ವಿದ್ಯಾರ್ಥಿಗಳಿಗೆ ಫ್ಯಾಷನ್ ಡಿಸೈನ್ ವಿಭಾಗದ ವತಿಯಿಂದ ಉಪನ್ಯಾಸ ಕಾರ್ಯಕ್ರಮ
ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ವಿದ್ಯಾರ್ಥಿಗಳಿಗೆ ಫ್ಯಾಷನ್ ಡಿಸೈನ್ ವಿಭಾಗದ ವತಿಯಿಂದ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು.ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಆಗಿ ಶ್ರೀಮತಿ ಪ್ರೇಮ ಆರ್ ಶೆಟ್ಟಿ,ಇಂಗ್ಲೀಷ್ ಶಿಕ್ಷಕಿ, ಸರಕಾರಿ ಪದವಿ ಪೂರ್ವ ಕಾಲೇಜು ಮುಲ್ಕಿ, ಇವರು ವಹಿಸಿದ್ದರು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಲಾಯಿತು.ವಿದ್ಯಾರ್ಥಿಗಳನ್ನು ಉದ್ದೇಶಿಸಿ ” ಫ್ಯಾಷನ್ ಕ್ಷೇತ್ರವೂ ಕೇವಲ ಬಟ್ಟೆಗಳನ್ನು ವಿನ್ಯಾಸ ಮಾಡುವುದು ಮಾತ್ರವಲ್ಲ ಅದು ನಮ್ಮ ಸೃಜನಶೀಲತೆ ಕಲ್ಪನೆ, ಮತ್ತು ಆತ್ಮವಿಶ್ವಾಸವನ್ನು ತೋರಿಸುವ ಒಂದು ಕಲೆಯಾಗಿದೆ ಎ0ದರು, ಹಾಗೂ […]
ಉದ್ಯೋಗ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಉಚಿತ ತರಬೇತಿ
ಉದ್ಯೋಗ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಉಚಿತ ತರಬೇತಿ ಕಾರ್ಯಕ್ರಮ ಎಲೆಕ್ಟ್ರಿಕ್ ಮೋಟಾರ್ ವೈಂಡಿಂಗ್, ಪಂಪ್ ಸೆಟ್ ರಿಪೇರಿ ಮತ್ತು ಸ್ಟಾರ್ಟರ್ಸ್ ತರಬೇತಿ(ಸಿಂಗಲ್ ಫೇಸ್, ತ್ರಿಫೇಸ್ ಮೋಟಾರ್ ವೈಂಡಿಂಗ್, ಫ್ಯಾನ್ ವೈಂಡಿಂಗ್, ಇಂಡಕ್ಷನ್ ಮೋಟಾರ್, ಸಬ್ಮರ್ಸಿಬಲ್ ಪಂಪ್, ಯುನಿವರ್ಸಲ್ ಮೋಟಾರ್, ಸ್ಟಾರ್-ಡೆಲ್ಟಾ ಸ್ಟಾರ್ಟರ್) 📅 ತರಬೇತಿ ಅವಧಿ: 01-04-2026 ರಿಂದ 30-04-2026 (30 ದಿನಗಳು)⏰ ಸಮಯ: ಬೆಳಗ್ಗೆ 9.30 ರಿಂದ ಸಂಜೆ 5.30 ರವರೆಗೆ 🍽️ ಊಟ ಮತ್ತು ವಸತಿಯೊಂದಿಗೆ ತರಬೇತಿ ಸಂಪೂರ್ಣ ಉಚಿತ 👥 ವಯಸ್ಸಿನ […]
ಬ್ರಹ್ಮಾವರ: ಬಿಜೆಪಿ ಗ್ರಾಮಾಂತರ ಯುವ ಮೋರ್ಚಾದಿಂದ ಭವ್ಯ ‘ಅಟಲ್ ಟ್ರೋಫಿ’ ಕ್ರಿಕೆಟ್ ಪಂದ್ಯಾಟ ಮಾಚ್ 14, 15 ರಂದು
ಬ್ರಹ್ಮಾವರ: ಬಿಜೆಪಿ ಗ್ರಾಮಾಂತರ ಯುವ ಮೋರ್ಚಾದಿಂದ ಭವ್ಯ ‘ಅಟಲ್ ಟ್ರೋಫಿ’ ಕ್ರಿಕೆಟ್ ಪಂದ್ಯಾಟ ಮಾಚ್ 14, 15 ರಂದುಬ್ರಹ್ಮಾವರ: ಭಾರತೀಯ ಜನತಾ ಪಾರ್ಟಿ ಉಡುಪಿ ಗ್ರಾಮಾಂತರ ಯುವ ಮೋರ್ಚಾ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಎ. ಸುವರ್ಣ ಅವರ ನೇತೃತ್ವದಲ್ಲಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮರಣಾರ್ಥ “ಅಟಲ್ ಟ್ರೋಫಿ” 90 ಗಜಗಳ ಕ್ರಿಕೆಟ್ ಪಂದ್ಯಾಟವನ್ನು ಮಾರ್ಚ್ 14 ಮತ್ತು 15 ರಂದು ಬ್ರಹ್ಮಾವರದ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಉಡುಪಿ […]
ಕೋಟದ ಪಂಚವರ್ಣ ಸಂಘಟನೆಗೆ ಜೈ ಕುಂದಾಪುರ ಸೇವಾ ಪುರಸ್ಕಾರ
ಕೋಟದ ಪಂಚವರ್ಣ ಸಂಘಟನೆಗೆ ಜೈ ಕುಂದಾಪುರ ಸೇವಾ ಪುರಸ್ಕಾರಕೋಟ: ಇಲ್ಲಿನ ಉಡುಪಿ ಜಿಲ್ಲೆಯ ಸಾಮಾಜಿಕ ಕಳಕಳಿ ಹಾಗೂ ರಕ್ತದಾನದಂತಹ ಕಾರ್ಯಕ್ರಮಗಳಿಂದ ಮನೆಮಾತಾದ ಸಂಸ್ಥೆ ಕುಂದಾಪುರದ ಜೈ ಕುಂದಾಪುರ ಸೇವಾ ಟ್ರಸ್ಟ್ ಇದೇ ಮೊದಲ ಬಾರಿಗೆ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಮುನ್ನುಡಿ ಬರೆಯುತ್ತಿದ್ದು ಇದೇ ಬರುವ ಎಪ್ರಿಲ್ ೧೨ರಂದು ಕೋಟ ಆರಕ್ಷಕ ಠಾಣೆಯ ಮುಂಭಾಗ ಜೈ ಕುಂದಾಪುರ ಸಂಭ್ರಮ-೨೦೨೬ ಎಂಬ ಶೀರ್ಷಿಕೆಯಡಿ ಸಾಮಾಜಿಕ ಕಾಳಜಿಯ ಕಾರ್ಯಕ್ರಮ ಆಯೋಜಿಸಿದೆ.ಈ ವೇದಿಕೆಯಲ್ಲಿ ಕೋಟದ ಕ್ರಿಯಾಶೀಲ ಸಂಘಟನೆಯಾದ ಪಂಚವರ್ಣ ಸಂಘಟನೆಗೆ ಜೈ ಕುಂದಾಪುರ […]









