ಸುಂದರವಾದ ಸ್ಮಾರ್ಟ್ ವಾಚ್ ನಿಮ್ಮದಾಗಿಸಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ ಕೋಟ: ಕೋಟ ಪಂಚವರ್ಣ ಮಹಿಳಾ ಮಂಡಲದ ಸಾದರಪಡಿಸುವ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಸಂಯೋಜನೆಯೊಂದಿಗೆ ನಡೆಯಲಿರುವ ಐದನೇ ವರ್ಷದ “ಆಸಾಡಿ ಒಡ್ರ್” ಸಾಧಕ ಪುರಸ್ಕಾರಕ್ಕೆ ರೇಡಿಯೋ ಕುಂದಾಪ್ರ ಮೂಲಕ ಜನಜನಿತರಾದ ನಿರೂಪಕಿ ಜ್ಯೋತಿ ಸಾಲಿಗ್ರಾಮ ಆಯ್ಕೆ ಗೊಳಿಸಲಾಗಿದೆ. ಅಗಸ್ಟ್ 9 ರ ಭಾನುವಾರ ಬೆಳಿಗ್ಗೆ 9 ರಿಂದ ಮಣೂರು ರಾಜಲಕ್ಷ್ಮೀ ಸಭಾಭವನದಲ್ಲಿ ನಡೆಯಲಿರುವ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಹಮ್ಮಿಕೊಳ್ಳಲಿರುವ “ಆಸಾಡಿ ಒಡ್ರ್” ಕಾರ್ಯಕ್ರಮದಲ್ಲಿ […]
Month: July 2026
ಮುಂಬೈನಲ್ಲಿ ತಪ್ಪಿದ ಮಹಾ ದುರಂತ: ಮೊಹರಂ ಮೆರವಣಿಗೆಯಲ್ಲಿ ವಿಷಕಾರಿ ಮಾತ್ರೆ ಹಂಚುತ್ತಿದ್ದ ವ್ಯಕ್ತಿಯ ಬಂಧನ!
ಮುಂಬೈ: ಕಳೆದ ಶುಕ್ರವಾರ (ಜೂನ್ 26) ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ನಡೆದ ಮೊಹರಂ ಮೆರವಣಿಗೆಯಲ್ಲಿ, ವಿಷಕಾರಿ ಮಾತ್ರೆಗಳನ್ನು ಸಾರ್ವಜನಿಕರಿಗೆ ವಿತರಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮಾತ್ರೆಗಳನ್ನು ಸೇವಿಸಿದ ಸುಮಾರು ಒಂದು ಡಜನ್ ಜನರು ಅಸ್ವಸ್ಥರಾದ ಬಳಿಕ, ಬೈಕುಲ್ಲಾ ಪ್ರದೇಶದಲ್ಲಿ ಫಯಾಜ್ ಪ್ರೇಮ್ಜಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕ್ಯಾಪ್ಸುಲ್ಗಳಲ್ಲಿ ಇಲಿ ವಿಷ ಮತ್ತು ಇತರ ಮಾರಕ ರಾಸಾಯನಿಕಗಳನ್ನು ಸೇರಿಸಲಾಗಿದ್ದು, ಆರೋಪಿ ಫಯಾಜ್ ಸುಮಾರು 15 ಸಾವಿರ ಜನರನ್ನು ಕೊಲ್ಲಲು ಬಯಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯ […]
ಉಜಿರೆಯ ರುಡ್ಸೆಟ್ ಸಂಸ್ಥೆಯಿಂದ ಮಹಿಳೆಯರಿಗೆ ಉಚಿತ ‘ವಸ್ತ್ರ ಚಿತ್ರ ಕಲಾ ಉದ್ಯಮಿ – ಎಂಬ್ರಾಯಿಡರಿ / ಫ್ಯಾಬ್ರಿಕ್ ಪೇಂಟಿಂಗ್’ ತರಬೇತಿ
ಗ್ರಾಮೀಣಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ನೀಡುವಲ್ಲಿ ಮುಂಚೂಣಿಯಲ್ಲಿರುವ ಉಜಿರೆಯ ಪ್ರಸಿದ್ಧ ರುಡ್ಸೆಟ್ ಸಂಸ್ಥೆ (RUDSETI) ವತಿಯಿಂದ ಸ್ವ-ಉದ್ಯೋಗ ಕೈಗೊಳ್ಳಲು ಆಸಕ್ತಿ ಇರುವ ಮಹಿಳೆಯರು ಹಾಗೂ ಯುವತಿಯರಿಗಾಗಿ ಉಚಿತ ‘ವಸ್ತ್ರ ಚಿತ್ರ ಕಲಾ ಉದ್ಯಮಿ – ಎಂಬ್ರಾಯಿಡರಿ / ಫ್ಯಾಬ್ರಿಕ್ ಪೇಂಟಿಂಗ್’ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ತರಬೇತಿಯ ವಿವರಗಳು: ತರಬೇತಿ ಅವಧಿ: 20.07.2026 ರಿಂದ 19.08.2026 ರ ವರೆಗೆ (ಒಟ್ಟು 31 ದಿನಗಳು). ತರಬೇತಿ ಸ್ಥಳ: ರುಡ್ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ. ಸೌಲಭ್ಯಗಳು: ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿಯ ಅವಧಿಯಲ್ಲಿ […]
ಸ್ವ ಉದ್ಯೋಗ ಆರ್ಥಿಕ ಭದ್ರತೆ ಜೊತೆಗೆ ಆತ್ಮವಿಶ್ವಾಸದ ಕೊಂಡಿಯಾಗಲಿ: ದಯಾನಂದ ಕೋಟ್ಯಾನ್
ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ, ಬ್ರಹ್ಮಾವರ ಇವರ ಆಶ್ರಯದಲ್ಲಿ ವಸ್ತ್ರ ಚಿತ್ರ ಕಲಾ ಲಘು ಉದ್ಯಮಿ (ಎಂಬ್ರಾಯ್ಡರಿ)ತರಬೇತಿಯ ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ದಯಾನಂದ ಕೋಟ್ಯಾನ್, ಕರ್ನಾಟಕ ರಾಜ್ಯ ಟೈಲರಿಂಗ್ ಅಸೋಸಿಯೇಷನ್ ನ ಉಡುಪಿ ಜಿಲ್ಲಾಧ್ಯಕರು ಹಾಗೂ ಮಾಲಕರು, ಔಟ್ ಫಿಟ್ ಲೇಡೀಸ್ ಟೈಲರ್,ಉಡುಪಿ ಮಾತನಾಡಿದ, ಮಹಿಳೆಯರು ತಮ್ಮ ಆಸಕ್ತಿಯ ಕ್ಷೇತ್ರವಾಗಿರುವ ಟೈಲರಿಂಗ್ ಹಾಗೂ ಎಂಬ್ರಾಯ್ಡರಿ ಉದ್ಯಮವು ಅತ್ಯಂತ ಲಾಭದಾಯಕ ಹಾಗೂ ಬಹಳ ಬೇಡಿಕೆಯಿರುವ […]
ಖ್ಯಾತ ನಟ, ನಿರ್ದೇಶಕ ಭಾಗ್ಯರಾಜ್ ನಿಧನ
ತಮಿಳು ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಭಾಗ್ಯರಾಜ್(73) ನಿಧನರಾದರು. ಹಠಾತ್ ಹೃದಯಾಘಾತದಿಂದ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಿಸದೆ ನಿಧನರಾದರು. ಸಹಾಯಕ ನಿರ್ದೇಶಕರಾಗಿ ವೃತ್ತಿಜೀವನವನ್ನು ಆರಂಭಿಸಿದ ಇವರು, ಅನೇಕ ಯಶಸ್ವಿ ಚಿತ್ರಗಳನ್ನು ನೀಡಿದರು. ತಮಿಳು ಚಿತ್ರರಂಗದಲ್ಲಿ ತಮ್ಮದೇ ಆದ ವಿಶಿಷ್ಟ ಶೈಲಿ & ಹಾಸ್ಯಭರಿತ ಕಥೆಗಳ ಮೂಲಕ ಜನಪ್ರಿಯರಾಗಿದ್ದ ಇವರನ್ನು ‘ಚಿತ್ರಕಥೆಯ ರಾಜ’ ಎಂದೂ ಕರೆಯಲಾಗುತ್ತಿತ್ತು. ಇವರ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ.
ಡ್ರೋನ್ ದಾಳಿಗೆ ಅಮೆರಿಕ ತಿರುಗೇಟು; ಇರಾನ್ ಮೇಲೆ ವಾಯುದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ..!
ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯಲ್ಲಿ ಸರಕು ಸಾಗಣೆ ಹಡಗಿನ ಮೇಲೆ ನಡೆದ ಡ್ರೋನ್ ದಾಳಿಗೆ ಪ್ರತಿಯಾಗಿ ಅಮೆರಿಕ ಶುಕ್ರವಾರ ಇರಾನ್ನ ಕ್ಷಿಪಣಿ ಮತ್ತು ಡ್ರೋನ್ ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ. ಕಳೆದ ವಾರವೇ ಯುದ್ಧ ಅಂತ್ಯಗೊಳಿಸಲು ಹಾಗೂ ಹಾರ್ಮುಜ್ ಜಲಸಂಧಿಯನ್ನು ಮತ್ತೆ ಸಂಪೂರ್ಣವಾಗಿ ತೆರೆಯಲು ಉಭಯ ದೇಶಗಳ ನಡುವೆ ಮಧ್ಯಂತರ ಒಪ್ಪಂದವಾಗಿದ್ದರೂ, ಈ ದಾಳಿ ಹಿನ್ನಡೆಯುಂಟು ಮಾಡಿದಂತಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಸರಕು ಹಡಗಿನ ಮೇಲಿನ ಡ್ರೋನ್ ದಾಳಿ ಕದನ ವಿರಾಮದ ಸ್ಪಷ್ಟ ಉಲ್ಲಂಘನೆ ಎಂದು ಆರೋಪಿಸಿದ್ದಾರೆ. […]
ನನ್ನ ಮಗಳು ತಪ್ಪು ಮಾಡಿದ್ರೆ ಅದೇ ಕೋಟೆಯಿಂದ ತಳ್ಳಿ ಬಿಡಿ – ಸಿಯಾ ಪೋಷಕರ ಆಕ್ರೋಶ
ಮುಂಬೈ: ನನ್ನ ಮಗಳು ತಪ್ಪು ಮಾಡಿದ್ರೆ ಕೇತನ್ನನ್ನು (Ketan) ತಳ್ಳಿ ಕೊಲೆಗೈದ ಅದೇ ಕೋಟೆಯಿಂದ ತಳ್ಳಿ ಬಿಡಿ ಎಂದು ಸಿಯಾ ಗೋಯಲ್ (Siya Goyal) ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಕೇತನ್ ಕೊಲೆ ಆರೋಪಿಯಾದ ಸಿಯಾಳ ತಾಯಿ ಪೂಜಾ ಗೋಯಲ್ ಮಾಧ್ಯಮಗಳ ಜೊತೆ ಮಾತನಾಡಿ, ನನ್ನ ಮಗಳು ಸಿಯಾ, ಕೇತನ್ ಜೊತೆ ಮದುವೆ ಮಾತುಕತೆ ವೇಳೆ ಅಸಮಾಧಾನ ವ್ಯಕ್ತಪಡಿಸಿರಲಿಲ್ಲ. ಇಬ್ಬರೂ ನವೆಂಬರ್ನಲ್ಲಿ ರಾಜಸ್ಥಾನದ ಉದಯಪುರದ ಅರಮನೆಯಲ್ಲಿ ಮದುವೆಯಾಗಲು ಸಿದ್ಧರಾಗಿದ್ದರು. ಕೇತನ್ ಸಾವು ಕೇವಲ ಒಂದು ಕುಟುಂಬವನ್ನು ಮಾತ್ರವಲ್ಲ, ಎರಡು […]
ರಾಜ್ಯದಲ್ಲಿ ಶೀಘ್ರದಲ್ಲೇ ‘ಬೈಕ್ ಆ್ಯಂಬುಲೆನ್ಸ್’ ವ್ಯವಸ್ಥೆ
ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್, ಗ್ರಾಮೀಣ ಪ್ರದೇಶಗಳಲ್ಲಿ ದುರ್ಗಮ ರಸ್ತೆಗಳು ಇವುಗಳಿಂದಾಗಿ ಅನೇಕ ಬಾರಿ ತುರ್ತು ವೈದ್ಯಕೀಯ ಸೇವೆ ಸಕಾಲಕ್ಕೆ ಲಭ್ಯವಾಗದೆ ರೋಗಿಗಳು ಪ್ರಾಣ ಕಳೆದುಕೊಳ್ಳುವ ದಾರುಣ ಘಟನೆಗಳು ಸಂಭವಿಸುತ್ತಿವೆ. ಈ ಸಮಸ್ಯೆಗೆ ಪರಿಹಾರ ಕಂಡುಹಿಡಿಯಲು ಕರ್ನಾಟಕ ಸರ್ಕಾರವು ಹೊಸ ಮಾಸ್ಟರ್ ಪ್ಲಾನ್ ರೂಪಿಸಿದೆ. ಅತ್ಯಂತ ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ಬಹಳ ಬೇಗ ವೈದ್ಯಕೀಯ ಸೇವೆ ಒದಗಿಸುವ ಸಲುವಾಗಿ ರಾಜ್ಯದಲ್ಲಿ ಶೀಘ್ರದಲ್ಲೇ ‘ಬೈಕ್ ಆ್ಯಂಬುಲೆನ್ಸ್’ ವ್ಯವಸ್ಥೆಯನ್ನು ಜಾರಿಗೊಳಿಸಲು ಆರೋಗ್ಯ ಸಚಿವರು ಗಂಭೀರ ಚಿಂತನೆ ನಡೆಸಿದ್ದಾರೆ ಎಂದು ಆರೋಗ್ಯ ಸಚಿವ ಯು.ಟಿ. […]
ಚಿರತೆ ದಾಳಿ ಕುರಿ ಮೇಯಿಸುತ್ತಿದ್ದ ಆದಿವಾಸಿ ಮಹಿಳೆ ಗ್ರೇಟ್ ಎಸ್ಕೇಪ್
ಚಾಮರಾಜನಗರದಲ್ಲಿ ಕಾಡು ಪ್ರಾಣಿಗಳ ಉಪಟಳ ಮಿತಿ ಮೀರಿದ್ದು, ಕಾಡಂಚಿನ ಗ್ರಾಮಗಳ ಜನರ ಬದುಕೇ ದುಸ್ತರವಾಗಿ ಮಾರ್ಪಟ್ಟಿದೆ. ಜನವಸತಿ ಪ್ರದೇಶಗಳಿಗೆ ಮೇಲಿಂದ ಮೇಲೆ ವನ್ಯ ಜೀವಿಗಳು ಲಗ್ಗೆ ಇಡುತ್ತಿರವ ಕಾರಣಕ್ಕೆ ಜೀವ ಭಯದಲ್ಲಿಯೇ ಜನ ಬದುಕುವಂತಾಗಿದೆ. ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟದ ಆನೆಹೊಲ ಹಾಡಿಯಲ್ಲಿ ಏಕಾಏಕಿ ಚಿರತೆ ದಾಳಿ ನಡೆಸಿದ್ದು, ಕುರಿ ಮೇಯಿಸುತ್ತಿದ್ದ ಆದಿವಾಸಿ ಮಹಿಳೆ ಪವಾಡ ಎಂಬಂತೆ ಜೀವ ಉಳಿಸಿಕೊಂಡಿದ್ದಾಳೆ. ಕಳೆದ 6 ತಿಂಗಳಿಂದ ಮಲೆ ಮಹದೇಶ್ವರ ಬೆಟ್ಟದ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ನಿರಂತರವಾಗಿ ಚಿರತೆ ದಾಳಿ […]
ಶಾಲಾ ವಿದ್ಯಾರ್ಥಿಗಳಿಗೆ ‘ಡಿಜಿಟಲ್ ಡಿಟಾಕ್ಸ್ ‘ಡಿಜಿಟಲ್ ಡಿಟಾಕ್ಸ್ ಎಂದರೇನು
ಶಾಲಾ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮೊಬೈಲ್, ಟ್ಯಾಬ್ಲೆಟ್ ಮತ್ತು ಕಂಪ್ಯೂಟರ್ಗಳ ಅತಿಯಾದ ಬಳಕೆಯನ್ನು ನಿಯಂತ್ರಿಸಲು ಹಾಗೂ ಅವರ ದೈಹಿಕ-ಮಾನಸಿಕ ಆರೋಗ್ಯವನ್ನು ಸುಧಾರಿಸಲು ತರಲು ಉದ್ದೇಶಿಸಿರುವ ಒಂದು ಪ್ರಮುಖ ಅಭಿಯಾನವೇ ‘ಡಿಜಿಟಲ್ ಡಿಟಾಕ್ಸ್’ (Digital Detox). ಇತ್ತೀಚಿನ ದಿನಗಳಲ್ಲಿ ಮಕ್ಕಳು ಆನ್ಲೈನ್ ಗೇಮ್ಸ್, ಸೋಶಿಯಲ್ ಮೀಡಿಯಾ ಮತ್ತು ರೀಲ್ಸ್ಗಳ ವ್ಯಾಮೋಹಕ್ಕೆ ಒಳಗಾಗುತ್ತಿರುವುದನ್ನು ತಡೆಯಲು ಈ ನಿಯಮವನ್ನು ಪ್ರಸ್ತಾಪಿಸಲಾಗಿದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ: 1. ಏನಿದು ‘ಡಿಜಿಟಲ್ ಡಿಟಾಕ್ಸ್’? ಸರಳವಾಗಿ ಹೇಳುವುದಾದರೆ, ಒಂದು ನಿರ್ದಿಷ್ಟ ಅವಧಿಯವರೆಗೆ ಮೊಬೈಲ್, ಇಂಟರ್ನೆಟ್, ಟಿವಿ […]










