webnews kannada

ಭಾರತೀಯರನ್ನು ತಮ್ಮ ದೇಶದಿಂದ ಹೊರಹಾಕಿದ ಕೆನಡಾ!

2026ರ ಮೊದಲ ಆರು ತಿಂಗಳಲ್ಲಿ ಕೆನಡಾ 3,323 ಭಾರತೀಯ ನಾಗರಿಕರನ್ನು ಗಡೀಪಾರು ಮಾಡಿದೆ. ಇದು ಅಧಿಕೃತ ಮಾಹಿತಿಯ ಪ್ರಕಾರ, ಕಳೆದ ಆರು ವರ್ಷಗಳಲ್ಲಿ ಇದು ಅತಿ ಹೆಚ್ಚು ಎಂದು ಹೇಳಲಾಗುತ್ತಿದೆ. ಕೆನಡಾ ಬಾರ್ಡರ್ ಸರ್ವೀಸಸ್ ಏಜೆನ್ಸಿ (ಸಿಬಿಎಸ್ಎ) ದತ್ತಾಂಶದ ಪ್ರಕಾರ, 2025ರ ಇಡೀ ವರ್ಷದಲ್ಲಿ ಗಡೀಪಾರು ಮಾಡಲಾದ ಭಾರತೀಯ ನಾಗರಿಕರ ಸಂಖ್ಯೆ 3,779 ಆಗಿದ್ದು, ಈ ವರ್ಷದ ಮೊದಲ ಆರು ತಿಂಗಳಲ್ಲಿ ಮಾತ್ರ 3,323 ಭಾರತೀಯರನ್ನು ಗಡೀಪಾರು ಮಾಡಲಾಗಿದೆ. ಕೆನಡಾ ತನ್ನ ವಲಸೆ ವ್ಯವಸ್ಥೆಯನ್ನು ಬಿಗಿಗೊಳಿಸುತ್ತಿದೆ. ಅಂತಾರಾಷ್ಟ್ರೀಯ […]

webnews kannada

ಆರೋಗ್ಯ, ಸ್ವಚ್ಛತೆ ಮತ್ತು ಆತ್ಮವಿಶ್ವಾಸದ ಅರಿವು ಮೂಡಿಸಿದ ಜಾಗೃತಿ ಕಾರ್ಯಕ್ರಮ

ಬಾರ್ಕೂರು,-ಸುಜ್ಞಾನ ನ್ಯಾಷನಲ್ ಪಿಯು ಕಾಲೇಜು, ಬಾರ್ಕೂರಿನ ವಿಮೆನ್ಸ್ ಫೋರಂ ವತಿಯಿಂದ ವಿದ್ಯಾರ್ಥಿನಿಯರಲ್ಲಿ ಆರೋಗ್ಯ, ವೈಯಕ್ತಿಕ ಸ್ವಚ್ಛತೆ, ಋತುಚಕ್ರದ ಆರೋಗ್ಯ, ಭಾವನಾತ್ಮಕ ಕ್ಷೇಮ ಹಾಗೂ ಆತ್ಮವಿಶ್ವಾಸದ ಕುರಿತು ಸಮಗ್ರ ಅರಿವು ಮೂಡಿಸುವ ಉದ್ದೇಶದಿಂದ “ಅರಿವು, ಆರೋಗ್ಯ ಮತ್ತು ಆತ್ಮವಿಶ್ವಾಸದ ಮೂಲಕ ಯುವ ಮನಸ್ಸುಗಳ ಸಬಲೀಕರಣ” ಎಂಬ ಆಶಯದೊಂದಿಗೆ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಎನ್‌ಆರ್‌ಸಿ ವೈದ್ಯಕೀಯ ಅಧಿಕಾರಿ ಡಾ. ಧನ್ಯಾ ಎನ್. ಹೆಗ್ಡೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿನಿಯರಿಗೆ ಋತುಚಕ್ರದ ವೈಜ್ಞಾನಿಕ ಹಾಗೂ ಆರೋಗ್ಯಪೂರ್ಣ ನಿರ್ವಹಣೆಯ […]

ಉದ್ಯೋಗ / ಶಿಕ್ಷಣ

ವಿದ್ಯಾರ್ಥಿಗಳಿಗೆ ಕೈಗಾರಿಕಾ ಭೇಟಿಯ ಮೂಲಕ ಪ್ರಾಯೋಗಿಕ ಜ್ಞಾನ

ಸುಜ್ಞಾನ ನ್ಯಾಷನಲ್ ಪಿಯು ಕಾಲೇಜು, ಬಾರ್ಕೂರಿನ ವಾಣಿಜ್ಯ ವಿಭಾಗದ ವತಿಯಿಂದ ಆಗಸ್ಟ್ 5, 2026ರಂದು ಶ್ರೀ ಕೃಷ್ಣಪ್ರಸಾದ್ ಕ್ಯಾಶ್ಯೂಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಕೈಗಾರಿಕಾ ಭೇಟಿಯನ್ನು ಆಯೋಜಿಸಲಾಯಿತು. ಸುಜ್ಞಾನ ನ್ಯಾಷನಲ್ ಪಿ ಯು ಕಾಲೇಜಿನ 100 ವಿದ್ಯಾರ್ಥಿಗಳ ತಂಡವು ಗೋಡಂಬಿ ಸಂಸ್ಕರಣಾ ಘಟಕದ ನೈಜ ಕಾರ್ಯವಿಧಾನವನ್ನು ನೇರವಾಗಿ ವೀಕ್ಷಿಸಿ, ಉತ್ಪಾದನಾ ಪ್ರಕ್ರಿಯೆ, ಗುಣಮಟ್ಟ ನಿಯಂತ್ರಣ, ಪ್ಯಾಕೇಜಿಂಗ್ ತಂತ್ರಗಳು ಹಾಗೂ ವ್ಯವಹಾರ ನಿರ್ವಹಣೆ ಮತ್ತು ಆಡಳಿತದ ಕುರಿತು ಅಮೂಲ್ಯ ಮಾಹಿತಿಯನ್ನು ಪಡೆದುಕೊಂಡರು. . ಈ ಪ್ರಾಯೋಗಿಕ ಅನುಭವವು ತರಗತಿಯ […]

webnews kannada

ಮತ್ತೆ ಅಬ್ಬರಿಸಲಿದೆ ಮಳೆ ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಮಳೆ ಚುರುಕುಗೊಂಡಿದ್ದು, ಕಳೆದ ಕೆಲ ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ಜನಜೀವನದ ಮೇಲೂ ಪರಿಣಾಮ ಬೀರುತ್ತಿದೆ. ಈ ನಡುವೆ ರಾಜ್ಯ ಹವಾಮಾನ ಇಲಾಖೆ ಮತ್ತೆ ಮಳೆ ಮುನ್ಸೂಚನೆ ನೀಡಿದೆ. ಜೂನ್ ಹಾಗೂ ಜುಲೈ ತಿಂಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ ಕಂಗಾಲಾಗಿದ್ದ ರೈತರಿಗೆ ಇದೀಗ ವರುಣನ ಆಗಮನ ಕೊಂಚ ನೆಮ್ಮದಿ ತಂದಿದೆ. ರಾಜ್ಯದ ಹಲವು ಜಲಾಶಯಗಳಿಗೆ ಒಳಹರಿವು ಹೆಚ್ಚಾಗುತ್ತಿದ್ದು, ರೈತರಲ್ಲಿ ಆಶಾಭಾವನೆ ಮೂಡಿದೆ. 6 ಜಿಲ್ಲೆಗಳಿಗೆ […]

webnews kannada

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ

ಬಿಡದಿ ವ್ಯಾಪ್ತಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಶನಿವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಆ ಕುರಿತ ವರದಿ ಇಲ್ಲಿದೆ: ಏನಿದು ಘಟನೆ? ಇಂದು ಮುಂಜಾನೆ ಬೆಂಗಳೂರು-ಮೈಸೂರು ದಶಪಥ ಎಕ್ಸ್‌ಪ್ರೆಸ್‌ವೇನಲ್ಲಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ (KSRTC) ಸೇರಿದ ಬಸ್ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದಲ್ಲಿದ್ದ ಬೃಹತ್ ಶೈನಿಂಗ್ […]

webnews kannada

ನಿಮ್ಮ ಎತ್ತರಕ್ಕೆ ತಕ್ಕಷ್ಟು ತೂಕ ನಿಮ್ಮಲ್ಲಿದೆಯೇ? ಈ ಸಿಂಪಲ್ ಲೆಕ್ಕಾಚಾರದ ಮೂಲಕ ತಕ್ಷಣವೇ ತಿಳಿದುಕೊಳ್ಳಿ

ನಿಮ್ಮ ಎತ್ತರಕ್ಕೆ ತಕ್ಕಂತೆ ಇರಬೇಕಾದ ಸರಿಯಾದ ತೂಕ ಎಷ್ಟು? ಇಲ್ಲಿದೆ ಕಂಪ್ಲೀಟ್ ಚಾರ್ಟ್! ಇಂದಿನ ಧಾವಂತದ ಜೀವನಶೈಲಿ, ಆಹಾರ ಪದ್ಧತಿ ಮತ್ತು ಶಾರೀರಿಕ ಶ್ರಮದ ಕೊರತೆಯಿಂದಾಗಿ ಬಹುತೇಕ ಜನರಲ್ಲಿ ಕಾಣಿಸಿಕೊಳ್ಳುತ್ತಿರುವ ಪ್ರಮುಖ ಸಮಸ್ಯೆ ಎಂದರೆ ತೂಕದ ಏರುಪೇರು. ಹಲವರು ತಮ್ಮ ಎತ್ತರಕ್ಕೆ ತಕ್ಕಂತೆ ಸರಿಯಾದ ತೂಕವನ್ನು ಹೊಂದಿರುವುದಿಲ್ಲ. ಒಂದೋ ಅತಿಯಾದ ತೂಕ (Obesity) ಅಥವಾ ಅತಿಯಾದ ತೆಳ್ಳಗಿರುವುದು (Underweight) ಅನೇಕ ಆರೋಗ್ಯ ಸಮಸ್ಯೆಗಳಿಗೆ ಆಹ್ವಾನ ನೀಡುತ್ತದೆ. ಎತ್ತರ ಮತ್ತು ತೂಕದ ನಡುವಿನ ಸಮತೋಲನ ತಪ್ಪಲು ಕಾರಣಗಳೇನು? ನಮ್ಮ […]

webnews kannada

ಚಿಪ್ಸ್ ತಿಂದು ಕೂಲ್ ಡ್ರಿಂಕ್ಸ್ ಕುಡಿಯೋ ಅಭ್ಯಾಸ ನಿಮಗಿದ್ಯಾ? ಇದು ಸ್ಲೋ ಪಾಯ್ಸನ್!

ಸಂಜೆ ಆದ್ರೆ ಸಾಕು ಚಿಪ್ಸ್ ತಿನ್ನುತ್ತಾ, ಕೂಲ್ ಡ್ರಿಂಕ್ಸ್ ಕುಡಿಯುವುದೆಂದರೆ ಎಲ್ಲರಿಗೂ ಇಷ್ಟ. ಅದರಲ್ಲೂ ಮಕ್ಕಳು ಹಾಗು ಯುವಕರಿಗೆ ಈ ಕಾಂಬಿನೇಷನ್ ಅತ್ಯಂತ ನೆಚ್ಚಿನದ್ದಾಗಿದೆ. ಆದರೆ, ಇವೆರಡನ್ನೂ ಒಟ್ಟಿಗೆ ಸೇವಿಸುವುದರಿಂದ ತಕ್ಷಣಕ್ಕೆ ಮಜಾ ಎನಿಸಿದರೂ, ದೀರ್ಘಾವಧಿಯಲ್ಲಿ ಇದು ದೇಹದ ಆರೋಗ್ಯಕ್ಕೆ ಎಷ್ಟು ಹಾನಿಕಾರಕ ಎಂಬುದು ನಿಮಗೆ ಗೊತ್ತಾ? ಆ ಕುರಿತ ವರದಿ ಇಲ್ಲಿದೆ: ಮೊದಲು ಟೇಸ್ಟ್ ಆಮೇಲೆ ಆರೋಗ್ಯದ ಮೇಲೆ ಹೊಡೆತ: ಚಿಪ್ಸ್ ನಲ್ಲಿ ಹೆಚ್ಚಿನ ಪ್ರಮಾಣದ ಉಪ್ಪು ಟ್ರಾನ್ಸ್ ಫ್ಯಾಟ್ ಮತ್ತು ಕೃತಕ ಸುವಾಸನೆ ಇರುತ್ತದೆ. […]

webnews kannada

ಭಾರಿ ಮಳೆಗೆ ಗೋಡೆ ಕುಸಿತ: 9 ಜನ ಸಾವು

ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ವಿವಿಧ ಕಡೆ ಮನೆ ಗೋಡೆ ಕುಸಿದು 9 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ನಿರಂತರ ಮಳೆಯಿಂದಾಗಿ ಹಳೆಯ ಮನೆ ಮತ್ತು ಗೋಡೆಗಳು ಕುಸಿದು ಬಿದ್ದ ಪರಿಣಾಮ ನಾಲ್ಕು ಮಕ್ಕಳು ಹಾಗೂ ಇಬ್ಬರು ಕಂದಮ್ಮಗಳು ಸೇರಿದಂತೆ ಒಟ್ಟು 9 ಮಂದಿ ಜೀವ ಕಳೆದುಕೊಂಡಿದ್ದಾರೆ ಉತ್ತರ ಪ್ರದೇಶದ ಪ್ರತಾಪ್‌ಗಢ ಜಿಲ್ಲೆಯ ಮಾಹುಲಿ ಬಜಾರ್‌ನಲ್ಲಿ ಆಗಸ್ಟ್ 5 ಮತ್ತು 6ರ ಮಧ್ಯರಾತ್ರಿ ಸುಮಾರು 2 ಗಂಟೆಗೆ, ಸುಮಾರು 100 ವರ್ಷ ಹಳೆಯದಾದ ಮನೆಯೊಂದರಲ್ಲಿ […]

webnews kannada

AI ಕಂಟೆಂಟ್, ಡೀಪ್‌ಫೇಕ್‌ಗಳಿಗೆ ಬ್ರೇಕ್: ಸಾಮಾಜಿಕ ಜಾಲತಾಣಗಳಿಗೆ ಕೇಂದ್ರದ ಹೊಸ ನಿಯಮ!

ಸಾಮಾಜಿಕ ಮಾಧ್ಯಮ ವೇದಿಕೆಗಳು ಸರ್ಕಾರ ಅಥವಾ ನ್ಯಾಯಾಲಯದ ಆದೇಶವನ್ನು ಸ್ವೀಕರಿಸಿದ ಮೂರು ಗಂಟೆಗಳ ಒಳಗೆ ಕಾನೂನುಬಾಹಿರ AI-ರಚಿತ ವಿಷಯವನ್ನು ತೆಗೆದುಹಾಕಬೇಕಾಗುತ್ತದೆ. ಇದು ಅಸ್ತಿತ್ವದಲ್ಲಿರುವ 36 ಗಂಟೆಗಳ ಅನುಸರಣಾ ಅವಧಿಯನ್ನು ತೀವ್ರವಾಗಿ ಕಡಿಮೆ ಮಾಡುತ್ತದೆ. ಸಾರ್ವಜನಿಕ ಸಮಾಲೋಚನೆಗಾಗಿ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಬಿಡುಗಡೆ ಮಾಡಿದ ಕರಡು ತಿದ್ದುಪಡಿಗಳು, AI-ರಚಿತ ವಿಷಯದ ಕಡ್ಡಾಯ ಲೇಬಲ್, ವೇಗವಾದ ಕುಂದುಕೊರತೆ ಪರಿಹಾರ ಸಮಯಾವಧಿಗಳು ಮತ್ತು ಡೀಪ್‌ಫೇಕ್‌ಗಳು, AI-ರಚಿತ ತಪ್ಪು ಮಾಹಿತಿ ಮತ್ತು ಇತರ ಹಾನಿಕಾರಕ ಕಂಟೆಂಟ್ ನ್ನು ಎದುರಿಸಲು […]

webnews kannada

ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಮಲ್ಲಿಕಾ ಶೆಟ್ಟಿ ಅವರಿಗೆ ಡಾಕ್ಟರೇಟ್

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಮಲ್ಲಿಕಾ ಶೆಟ್ಟಿಯವರಿಗೆ ಶ್ರೀನಿವಾಸ ವಿಶ್ವವಿದ್ಯಾಲಯವು ‘ಎಂಟನೇ ತರಗತಿಯ ವಿದ್ಯಾರ್ಥಿಗಳಲ್ಲಿ ವಿಜ್ಞಾನ ವಿಷಯದ ಸಾಮರ್ಥ್ಯಗಳು, ಆಯ್ದ ಕನ್ನಡ ಭಾಷಾ ಸಾಮರ್ಥ್ಯಗಳು, ವೈಜ್ಞಾನಿಕ ತಾರ್ಕಿಕ ಚಿಂತನಾ ಸಾಮರ್ಥ್ಯ ಹಾಗೂ ವಿಜ್ಞಾನ ವಿಷಯದ ಶೈಕ್ಷಣಿಕ ಸಾಧನೆಯನ್ನು ಅಭಿವೃದ್ಧಿಪಡಿಸುವಲ್ಲಿ ಅಂತರಶಿಸ್ತೀಯ ಬಹುಮಾಧ್ಯಮ ಬೋಧನಾ ವಿಧಾನವು ಬೀರುವ ಪರಿಣಾಮಕಾರಿತ್ವದ ಅಧ್ಯಯನ’ ಎಂಬ ಪ್ರಬಂಧಕ್ಕಾಗಿ ಪಿಎಚ್‌ಡಿ ಪದವಿಯನ್ನು ನೀಡಿದೆ.ಅಲೋಶಿಯಸ್ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಪಕಿ ಡಾ. ವಿಜಯಲಕ್ಷ್ಮಿ ನಾಯಕ್‌ರವರ ಮಾರ್ಗದರ್ಶನದಲ್ಲಿ ಸಂಶೋಧನಾ ಪ್ರಬಂಧವನ್ನು ಯಶಸ್ವಿಯಾಗಿ ಪೂರೈಸಿದ್ದಾರೆ.ಇವರು ತಮ್ಮ […]