
○ ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ವಿದ್ಯಾರ್ಥಿಗಳಿಗೆ ಸ್ನೇಹ ಭಾವ ಹಾಗೂ ಐಕ್ಯತೆಯನ್ನು ಹೆಚ್ಚಿಸುವ ಉದ್ದೇಶದಿಂದ ಇಫ್ತಾರ್ ಕೂಟವನ್ನು ಆಯೋಜಿಸಲಾಗಿತ್ತು.ಈ ಕಾರ್ಯಕ್ರಮದ ಅಧ್ಯಕ್ಷರಾಗಿ ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯರವರು, ವಹಿಸಿದ್ದರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷರಾದ ಶ್ರೀ ಸುಬ್ರಹ್ಮಣ್ಯರವರು ವಿದ್ಯಾರ್ಥಿಗಳನ್ನು ಕುರಿತು “ಇಫ್ತಾರ್ ಕೂಟವೂ ಸಹೋದರತ್ವ, ಪ್ರೀತಿ, ಮತ್ತು ಐಕ್ಯತೆಯ ಸಂಕೇತವಾಗಿದೆ. ಈ ಕಾರ್ಯಕ್ರಮದ ಮೂಲಕ ನಾವು ಪರಸ್ಪರ ಗೌರವ, ಸ್ನೇಹ, ಮತ್ತು ಸಾಮರಸ್ಯವನ್ನು ಬೆಳೆಸಿಕೊಳ್ಳಬಹುದು ಎ0ದರು.ಹಾಗೂ ಇಫ್ತಾರ್ ಕೂಟ ಆಯೋಜಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.ಕಾರ್ಯಕ್ರಮದ ವೇದಿಕೆಯಲ್ಲಿ ವಿದ್ಯಾಲಕ್ಷ್ಮೀ ಕಾಲೇಜಿನ ಪ್ರಾ0ಶುಪಾಲರದ ಶ್ರೀಮತಿ ಡಾ, ಸೀಮಾ ಭಟ್. ಕಾಲೇಜಿನ ಆಡಳಿತ ಅಧಿಕಾರಿ ಶ್ರೀಮತಿ ಮಮತಾ. ಉಪ ಪ್ರಾ0ಶುಪಾಲರದ ಶ್ರೀಮತಿ ಸುಜಾತಾ,ಕಾಲೇಜಿನ ಸಾಂಸ್ಕೃತಿಕ ಅಧ್ಯಕ್ಷೆ ಶ್ರೀಮತಿ ರಾಝಿಕ, ಉಪಸ್ಥಿತರಿದ್ದರು.ಕಾರ್ಯಕ್ರಮದ ನಿರೂಪಣೆಯನ್ನು ಪ್ರಥಮ ಬಿ.ಬಿ.ಎ ವಿದ್ಯಾರ್ಥಿನಿ ಹಾನಾನ್,ಸ್ವಾಗತವನ್ನು ದ್ವಿತೀಯ ಬಿಬಿಎ ವಿದ್ಯಾರ್ಥಿನಿ ರುಕಯ್ಯ ಪಾತಿಮಾ , ಧನ್ಯವಾದವನ್ನು ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಆಯಿಷಾ ರಿಝ ಅವರು ನಡೆಸಿಕೊಟ್ಟರು….

