webnews kannada

ಪಂಚವರ್ಣದ ಆಸಾಡಿ ಒಡ್ರ್  ಸಾಧಕ ಮಹಿಳಾ ಪುರಸ್ಕಾರಕ್ಕೆ ರೇಡಿಯೋ ಕುಂದಾಪ್ರ ಜ್ಯೋತಿ ಸಾಲಿಗ್ರಾಮ ಆಯ್ಕೆ

 ಸುಂದರವಾದ ಸ್ಮಾರ್ಟ್ ವಾಚ್ ನಿಮ್ಮದಾಗಿಸಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

ಕೋಟ:  ಕೋಟ ಪಂಚವರ್ಣ ಮಹಿಳಾ ಮಂಡಲದ ಸಾದರಪಡಿಸುವ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಸಂಯೋಜನೆಯೊಂದಿಗೆ ನಡೆಯಲಿರುವ ಐದನೇ ವರ್ಷದ “ಆಸಾಡಿ ಒಡ್ರ್” ಸಾಧಕ ಪುರಸ್ಕಾರಕ್ಕೆ ರೇಡಿಯೋ ಕುಂದಾಪ್ರ ಮೂಲಕ ಜನಜನಿತರಾದ ನಿರೂಪಕಿ   ಜ್ಯೋತಿ ಸಾಲಿಗ್ರಾಮ  ಆಯ್ಕೆ ಗೊಳಿಸಲಾಗಿದೆ.

   ಅಗಸ್ಟ್ 9 ರ ಭಾನುವಾರ ಬೆಳಿಗ್ಗೆ 9 ರಿಂದ ಮಣೂರು ರಾಜಲಕ್ಷ್ಮೀ ಸಭಾಭವನದಲ್ಲಿ  ನಡೆಯಲಿರುವ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಹಮ್ಮಿಕೊಳ್ಳಲಿರುವ “ಆಸಾಡಿ ಒಡ್ರ್” ಕಾರ್ಯಕ್ರಮದಲ್ಲಿ ಈ ಪುರಸ್ಕಾರ ನೀಡಿ ಗೌರವಿಸಲಾಗುವುದು.

 ವಿಶೇಷ ಆಹ್ವಾನಿತರಾಗಿ   ಕುಂದಗನ್ನಡ ರಾಯಬಾರಿ ಮನು ಹಂದಾಡಿ(ಮನೋಹರ್ ಶೆಟ್ಟಿ)  ಭಾಗವಹಿಸಲಿದ್ದಾರೆ.

 ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ಗ್ರಾಮೀಣ ತಿನಿಸುಗಳು, ಪರಿಕರ ಪ್ರದರ್ಶನ, ಸ್ಪರ್ಧೆ ಸ್ನೇಹಕೂಟ ಮಣೂರು  ಇವರುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದೆ.

 ಸ್ನೇಹಕೂಟ ಮಣೂರು  ಈ ಕಾರ್ಯಕ್ರಮಕ್ಕೆ ಸಹಕಾರ ನೀಡಲಿದೆ ಎಂದು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅತಿ ಕಡಿಮೆ ಬೆಲೆಗೆ ಉತ್ತಮವಾದ ಸ್ಮಾರ್ಟ್ ವಾಚ್ ಇಂದು ನಿಮ್ಮದಾಗಿಸಿಕೊಳ್ಳಿ

Leave a Reply

Your email address will not be published. Required fields are marked *