ತಮಿಳು ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಭಾಗ್ಯರಾಜ್(73) ನಿಧನರಾದರು. ಹಠಾತ್ ಹೃದಯಾಘಾತದಿಂದ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಿಸದೆ ನಿಧನರಾದರು. ಸಹಾಯಕ ನಿರ್ದೇಶಕರಾಗಿ ವೃತ್ತಿಜೀವನವನ್ನು ಆರಂಭಿಸಿದ ಇವರು, ಅನೇಕ ಯಶಸ್ವಿ ಚಿತ್ರಗಳನ್ನು ನೀಡಿದರು. ತಮಿಳು ಚಿತ್ರರಂಗದಲ್ಲಿ ತಮ್ಮದೇ ಆದ ವಿಶಿಷ್ಟ ಶೈಲಿ & ಹಾಸ್ಯಭರಿತ ಕಥೆಗಳ ಮೂಲಕ ಜನಪ್ರಿಯರಾಗಿದ್ದ ಇವರನ್ನು ‘ಚಿತ್ರಕಥೆಯ ರಾಜ’ ಎಂದೂ ಕರೆಯಲಾಗುತ್ತಿತ್ತು. ಇವರ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ.
Author: karavalivaninews@gmail.com
ಡ್ರೋನ್ ದಾಳಿಗೆ ಅಮೆರಿಕ ತಿರುಗೇಟು; ಇರಾನ್ ಮೇಲೆ ವಾಯುದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ..!
ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯಲ್ಲಿ ಸರಕು ಸಾಗಣೆ ಹಡಗಿನ ಮೇಲೆ ನಡೆದ ಡ್ರೋನ್ ದಾಳಿಗೆ ಪ್ರತಿಯಾಗಿ ಅಮೆರಿಕ ಶುಕ್ರವಾರ ಇರಾನ್ನ ಕ್ಷಿಪಣಿ ಮತ್ತು ಡ್ರೋನ್ ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ. ಕಳೆದ ವಾರವೇ ಯುದ್ಧ ಅಂತ್ಯಗೊಳಿಸಲು ಹಾಗೂ ಹಾರ್ಮುಜ್ ಜಲಸಂಧಿಯನ್ನು ಮತ್ತೆ ಸಂಪೂರ್ಣವಾಗಿ ತೆರೆಯಲು ಉಭಯ ದೇಶಗಳ ನಡುವೆ ಮಧ್ಯಂತರ ಒಪ್ಪಂದವಾಗಿದ್ದರೂ, ಈ ದಾಳಿ ಹಿನ್ನಡೆಯುಂಟು ಮಾಡಿದಂತಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಸರಕು ಹಡಗಿನ ಮೇಲಿನ ಡ್ರೋನ್ ದಾಳಿ ಕದನ ವಿರಾಮದ ಸ್ಪಷ್ಟ ಉಲ್ಲಂಘನೆ ಎಂದು ಆರೋಪಿಸಿದ್ದಾರೆ. […]
ನನ್ನ ಮಗಳು ತಪ್ಪು ಮಾಡಿದ್ರೆ ಅದೇ ಕೋಟೆಯಿಂದ ತಳ್ಳಿ ಬಿಡಿ – ಸಿಯಾ ಪೋಷಕರ ಆಕ್ರೋಶ
ಮುಂಬೈ: ನನ್ನ ಮಗಳು ತಪ್ಪು ಮಾಡಿದ್ರೆ ಕೇತನ್ನನ್ನು (Ketan) ತಳ್ಳಿ ಕೊಲೆಗೈದ ಅದೇ ಕೋಟೆಯಿಂದ ತಳ್ಳಿ ಬಿಡಿ ಎಂದು ಸಿಯಾ ಗೋಯಲ್ (Siya Goyal) ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಕೇತನ್ ಕೊಲೆ ಆರೋಪಿಯಾದ ಸಿಯಾಳ ತಾಯಿ ಪೂಜಾ ಗೋಯಲ್ ಮಾಧ್ಯಮಗಳ ಜೊತೆ ಮಾತನಾಡಿ, ನನ್ನ ಮಗಳು ಸಿಯಾ, ಕೇತನ್ ಜೊತೆ ಮದುವೆ ಮಾತುಕತೆ ವೇಳೆ ಅಸಮಾಧಾನ ವ್ಯಕ್ತಪಡಿಸಿರಲಿಲ್ಲ. ಇಬ್ಬರೂ ನವೆಂಬರ್ನಲ್ಲಿ ರಾಜಸ್ಥಾನದ ಉದಯಪುರದ ಅರಮನೆಯಲ್ಲಿ ಮದುವೆಯಾಗಲು ಸಿದ್ಧರಾಗಿದ್ದರು. ಕೇತನ್ ಸಾವು ಕೇವಲ ಒಂದು ಕುಟುಂಬವನ್ನು ಮಾತ್ರವಲ್ಲ, ಎರಡು […]
ರಾಜ್ಯದಲ್ಲಿ ಶೀಘ್ರದಲ್ಲೇ ‘ಬೈಕ್ ಆ್ಯಂಬುಲೆನ್ಸ್’ ವ್ಯವಸ್ಥೆ
ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್, ಗ್ರಾಮೀಣ ಪ್ರದೇಶಗಳಲ್ಲಿ ದುರ್ಗಮ ರಸ್ತೆಗಳು ಇವುಗಳಿಂದಾಗಿ ಅನೇಕ ಬಾರಿ ತುರ್ತು ವೈದ್ಯಕೀಯ ಸೇವೆ ಸಕಾಲಕ್ಕೆ ಲಭ್ಯವಾಗದೆ ರೋಗಿಗಳು ಪ್ರಾಣ ಕಳೆದುಕೊಳ್ಳುವ ದಾರುಣ ಘಟನೆಗಳು ಸಂಭವಿಸುತ್ತಿವೆ. ಈ ಸಮಸ್ಯೆಗೆ ಪರಿಹಾರ ಕಂಡುಹಿಡಿಯಲು ಕರ್ನಾಟಕ ಸರ್ಕಾರವು ಹೊಸ ಮಾಸ್ಟರ್ ಪ್ಲಾನ್ ರೂಪಿಸಿದೆ. ಅತ್ಯಂತ ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ಬಹಳ ಬೇಗ ವೈದ್ಯಕೀಯ ಸೇವೆ ಒದಗಿಸುವ ಸಲುವಾಗಿ ರಾಜ್ಯದಲ್ಲಿ ಶೀಘ್ರದಲ್ಲೇ ‘ಬೈಕ್ ಆ್ಯಂಬುಲೆನ್ಸ್’ ವ್ಯವಸ್ಥೆಯನ್ನು ಜಾರಿಗೊಳಿಸಲು ಆರೋಗ್ಯ ಸಚಿವರು ಗಂಭೀರ ಚಿಂತನೆ ನಡೆಸಿದ್ದಾರೆ ಎಂದು ಆರೋಗ್ಯ ಸಚಿವ ಯು.ಟಿ. […]
ಚಿರತೆ ದಾಳಿ ಕುರಿ ಮೇಯಿಸುತ್ತಿದ್ದ ಆದಿವಾಸಿ ಮಹಿಳೆ ಗ್ರೇಟ್ ಎಸ್ಕೇಪ್
ಚಾಮರಾಜನಗರದಲ್ಲಿ ಕಾಡು ಪ್ರಾಣಿಗಳ ಉಪಟಳ ಮಿತಿ ಮೀರಿದ್ದು, ಕಾಡಂಚಿನ ಗ್ರಾಮಗಳ ಜನರ ಬದುಕೇ ದುಸ್ತರವಾಗಿ ಮಾರ್ಪಟ್ಟಿದೆ. ಜನವಸತಿ ಪ್ರದೇಶಗಳಿಗೆ ಮೇಲಿಂದ ಮೇಲೆ ವನ್ಯ ಜೀವಿಗಳು ಲಗ್ಗೆ ಇಡುತ್ತಿರವ ಕಾರಣಕ್ಕೆ ಜೀವ ಭಯದಲ್ಲಿಯೇ ಜನ ಬದುಕುವಂತಾಗಿದೆ. ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟದ ಆನೆಹೊಲ ಹಾಡಿಯಲ್ಲಿ ಏಕಾಏಕಿ ಚಿರತೆ ದಾಳಿ ನಡೆಸಿದ್ದು, ಕುರಿ ಮೇಯಿಸುತ್ತಿದ್ದ ಆದಿವಾಸಿ ಮಹಿಳೆ ಪವಾಡ ಎಂಬಂತೆ ಜೀವ ಉಳಿಸಿಕೊಂಡಿದ್ದಾಳೆ. ಕಳೆದ 6 ತಿಂಗಳಿಂದ ಮಲೆ ಮಹದೇಶ್ವರ ಬೆಟ್ಟದ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ನಿರಂತರವಾಗಿ ಚಿರತೆ ದಾಳಿ […]
ಶಾಲಾ ವಿದ್ಯಾರ್ಥಿಗಳಿಗೆ ‘ಡಿಜಿಟಲ್ ಡಿಟಾಕ್ಸ್ ‘ಡಿಜಿಟಲ್ ಡಿಟಾಕ್ಸ್ ಎಂದರೇನು
ಶಾಲಾ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮೊಬೈಲ್, ಟ್ಯಾಬ್ಲೆಟ್ ಮತ್ತು ಕಂಪ್ಯೂಟರ್ಗಳ ಅತಿಯಾದ ಬಳಕೆಯನ್ನು ನಿಯಂತ್ರಿಸಲು ಹಾಗೂ ಅವರ ದೈಹಿಕ-ಮಾನಸಿಕ ಆರೋಗ್ಯವನ್ನು ಸುಧಾರಿಸಲು ತರಲು ಉದ್ದೇಶಿಸಿರುವ ಒಂದು ಪ್ರಮುಖ ಅಭಿಯಾನವೇ ‘ಡಿಜಿಟಲ್ ಡಿಟಾಕ್ಸ್’ (Digital Detox). ಇತ್ತೀಚಿನ ದಿನಗಳಲ್ಲಿ ಮಕ್ಕಳು ಆನ್ಲೈನ್ ಗೇಮ್ಸ್, ಸೋಶಿಯಲ್ ಮೀಡಿಯಾ ಮತ್ತು ರೀಲ್ಸ್ಗಳ ವ್ಯಾಮೋಹಕ್ಕೆ ಒಳಗಾಗುತ್ತಿರುವುದನ್ನು ತಡೆಯಲು ಈ ನಿಯಮವನ್ನು ಪ್ರಸ್ತಾಪಿಸಲಾಗಿದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ: 1. ಏನಿದು ‘ಡಿಜಿಟಲ್ ಡಿಟಾಕ್ಸ್’? ಸರಳವಾಗಿ ಹೇಳುವುದಾದರೆ, ಒಂದು ನಿರ್ದಿಷ್ಟ ಅವಧಿಯವರೆಗೆ ಮೊಬೈಲ್, ಇಂಟರ್ನೆಟ್, ಟಿವಿ […]
ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ ಕೇಸ್.. ಮೂವರ ಜಾಮೀನು ಅರ್ಜಿ ವಜಾ
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ & ಅವಹೇಳನಕಾರಿ ಕಾಮೆಂಟ್ಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಪ್ರಕರಣದ ಆರೋಪಿಗಳಾದ ಪ್ರಶಾಂತ್ ತಲ್ವಾರ್, ಚಂದ್ರಶೇಖರ್ & ನಿಂಗರಾಜ್ ಗುಲಾಪ್ಪ ತಲ್ವಾರ್ ಎಂಬವರು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಕೋರ್ಟ್ ತಿರಸ್ಕರಿಸಿದೆ. ಇದಕ್ಕೂ ಮೊದಲು ಸೆಷನ್ಸ್ ಕೋರ್ಟ್ ಕೂಡ ಮೂವರು ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು
ಶಾಶ್ವತ ವಿದ್ಯುತ್ ಸಂಪರ್ಕ.. ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್
ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಕಾಯುತ್ತಿರುವವರಿಗೆ OC ಯಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿರುವ ಅಥವಾ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ಕಟ್ಟಡ ನಿರ್ಮಿಸಿರುವ ಪ್ರಕರಣಗಳಿಗೆ & ಯಾವುದೇ ವಿದ್ಯುತ್ ಸಂಪರ್ಕ ಪಡೆಯದೇ ಕಟ್ಟಡ ಪೂರ್ಣಗೊಂಡವರಿಗೆ ಮಾತ್ರ ಅನ್ವಯಿಸುವಂತೆ ಒಸಿ ಪ್ರಮಾಣಪತ್ರ ಪಡೆಯುವುದರಿಂದ, ವಿನಾಯಿತಿ ನೀಡಿ ಇಂಧನ ಇಲಾಖೆ ಆದೇಶಿಸಿದೆ. 15 ದಿನದೊಳಗೆ ಅರ್ಹರು ಅರ್ಜಿ ಸಲ್ಲಿಸಬಹುದು.
ಅನ್ನಭಾಗ್ಯ ಪರಿಷ್ಕರಣೆ: 13 ರಿಂದ 14 ಲಕ್ಷ ಅನರ್ಹರನ್ನು ತೆಗೆಯಬೇಕಿದೆ- ಸಚಿವ ಕೆ.ಎಚ್ ಮುನಿಯಪ್ಪ
(www.webnewskannada.com): ಅನ್ನಭಾಗ್ಯ ಯೋಜನೆ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯಿಸಿದ್ದಾರೆ ಈ ಕುರಿತು ಮಾತನಾಡಿದ ಸಚಿವ ಕೆಎಚ್ ಮುನಿಯಪ್ಪ, ಅನ್ನಭಾಗ್ಯ ಯೋಜನೆ ಪರಿಷ್ಕರಣೆ ಮಾಡಬೇಕಾಗಿದೆ. ಸುಮಾರು 13 ಲಕ್ಷ ಅನರ್ಹರಿದ್ದಾರೆ ಅವರನ್ನ ತೆಗೆಯಬೇಕಿದೆ . ಬಡವರಿಗೆ ಅನ್ಯಭಾಗ್ಯ ನೀಡಬೇಕು. ಅನರ್ಹರು ಎಪಿಎಲ್ ಗೆ ಹೋಗಬೇಕು. ನಾನು ಈ ಹಿಂದೆಯೇ ಪ್ರಯತ್ನ ಮಾಡಿದ್ದೆ. ಆಗ ಗೊಂದಲ ಆಗಿತ್ತು. ಮನವಿ ಮಾಡುತ್ತಿದ್ದೇನೆ ಬಡವರಿಗೆ ಅವಕಾಶ ಮಾಡಿಕೊಡಿ ಎಂದರು. ಸಚಿವ ಸಂಫುಟ ಉಪಸಮಿತಿ ಸಭೆ ಏಕೆ ಕರದಿದ್ದಾರೆ […]
ರಾಜ್ಯದಲ್ಲಿ ಭಾರೀ ಮಳೆ: ಯೆಲ್ಲೊ ಅಲರ್ಟ್ ಘೋಷಣೆ
ರಾಜ್ಯದಲ್ಲಿ ಮಳೆಯ ಅಬ್ಬರ ಶುರುವಾಗಿದೆ. ಸೋಮವಾರದಿಂದ ಮೂರು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಭಾರೀ ಮಳೆಯ ಸೂಚನೆ ಹಿನ್ನಲೆಯಲ್ಲಿ ಇಂದು 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow alert) ಘೋಷಿಸಲಾಗಿದೆ. ಜೂನ್ ತಿಂಗಳ ನಾಲ್ಕನೇ ವಾರಕ್ಕೆ ಪ್ರವೇಶಿಸುತ್ತಿದ್ದರೂ ಈ ಬಾರಿ ಮುಂಗಾರು ಮಳೆ ಪ್ರಮಾಣದಲ್ಲಿ ಕರ್ನಾಟಕದಲ್ಲಿ ಬಹುತೇಕ ಕಡಿಮೆಯಾಗಿದೆ. ಕಳೆದ ವರ್ಷದಂತೆ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗಿಲ್ಲ. ಬಿಟ್ಟೂ ಬಿಟ್ಟೂ ಮಳೆ ಬರುತ್ತಿದೆ. ಆದರೆ ಕಳೆದೊಂದು […]










