ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು,ಗೆಳೆಯರ ಬಳಗ ಕಾರ್ಕಡ,ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ರೈತಧ್ವನಿ ಸಂಘ ಕೋಟ,ಸ್ನೇಹಕೂಟ ಮಣೂರು ಇವರುಗಳ ಸಹಯೋಗದೊಂದಿಗೆ ೫೨ನೇ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಹಿರಿಯ ಕೃಷಿಕ ದಾರೋಜ್ಜಿಮನೆ ಆನಂದ ಕಾಂಚನ್ ಇವರಿಗೆ ಕೃಷಿ ಪುರಸ್ಕಾರ ನೀಡಿ ಗೌರವಿಸಲಾಯಿತು. ತೆಕ್ಕಟ್ಟೆ ಪಂಚಾಯತ್ ಮಾಜಿ ಅಧ್ಯಕ್ಷ ಶೇಖರ್ ಕಾಂಚನ್ ಕೊಮೆ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಕೋಟತಟ್ಟು ಪಡುಕರೆಯ ಪ್ರಗತಿಪರ […]
Author: karavalivaninews@gmail.com
ಬ್ರಹ್ಮಾವರದ ಗಾಂಧೀ ಮೈದಾನದಲ್ಲಿ ಇಂದು ಅಭಿಮತ ಸಂಭ್ರಮ
ಜನಸೇವಾ ಟ್ರಸ್ಟ್ ಗಿಳಿಯಾರು ಆಶ್ರಯದಲ್ಲಿ ಅಭಿಮತ ಸಂಭ್ರಮ ಕಾರ್ಯಕ್ರಮ ಫೆ.14ರಂದು ಸಂಜೆ 6ಗಂಟೆಗೆ ಬ್ರಹ್ಮಾವರ ಗಾಂಧೀ ಮೈದಾನದಲ್ಲಿ ಜರಗಲಿದೆ.ಈ ಪ್ರಯುಕ್ತ ಆರಂಭದಲ್ಲಿ ನೃತ್ಯವಸಂತ ನಾಟ್ಯಾಲಯ ಕುಂದಾಪುರ ಆಶ್ರಯದಲ್ಲಿನೃತ್ಯೋಪಾಸನೆ ಕಾರ್ಯಕ್ರಮ ನಡೆಯಲಿದ್ದು, ಅನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿಮುಂಬೈ ಪೊಲೀಸ್ ಇಲಾಖೆಯ ನಿವೃತ್ತ ಎ.ಸಿ.ಪಿ. ಎಣ್ಣೆಹೊಳೆ ದಯಾ ನಾಯಕ್ ಅವರಿಗೆ ಅಭಿಮತಕೀರ್ತಿ ಕಲಶ ಮಹಾಗೌರವ ನೀಡಿ ಗೌರವಿಸಲಾಗುವುದು ಹಾಗೂ ತುಳು ಜಾನಪದ ವಿದ್ವಾಂಸಬನ್ನಂಜೆ ಬಾಬು ಅಮೀನ್, ಸೂಲಗಿತ್ತಿ ಲಕ್ಷ್ಮೀ ಪೂಜಾರಿ, ಯಶಸ್ವಿ ಕಲಾವೃಂದ ತೆಕ್ಕಟ್ಟೆಸಂಸ್ಥೆಗಳಿಗೆ ಯಶೋಗಾಥೆ ಗೌರವ ನೀಡಿ ಗೌರವಿಸಲಾಗುವುದ. […]
ಅಸ್ತಮಾ ಸಮಸ್ಯೆ: ನಿರಂತರ ಕೆಮ್ಮುತ್ತಿದ್ದ ವ್ಯಕ್ತಿ ಮೇಲೆ ನೆರೆಮನೆಯವರ ಹಲ್ಲೆ, ಸಾವು
ಬೆಂಗಳೂರು: ಅಸ್ತಮಾ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಜೋರಾಗಿ ಕೆಮ್ಮಿದ್ದಕ್ಕೆ ನೆರೆಮನೆಯವರು ಜಗಳಕ್ಕಿಳಿದು ಹಲ್ಲೆ ನಡೆಸಿದ್ದು, ಪರಿಣಾಮ ಉಸಿರಾಟ ಸಮಸ್ಯೆಯಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆಯೊಂದು ಬೆಂಗಳೂರಿನ ಹೊರವಲಯದ ಬಿಡದಿ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ವಿನೋದ್ ಕುಮಾರ್ ಶೈನೀ (34) ಎಂದು ಗುರುತಿಸಲಾಗಿದೆ. ಇವರು ರಾಜಸ್ಥಾನ ಮೂಲದವರಾಗಿದ್ದು, ಬಿಡದಿ ತಾಲೂಕಿನ ಕೆತಗಾನಹಳ್ಳಿ ಗ್ರಾಮದಲ್ಲಿ ವಾಸವಾಗಿದ್ದರು. ಖಾಸಗಿ ಸಾರಿಗೆ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದರು. ಫೆಬ್ರವರಿ 7ರಂದು ಸಂಜೆ ವಿನೋದ್ ಕುಮಾರ್ ಜೋರಾಗಿ ಕೆಮ್ಮುತ್ತಿದ್ದಾಗ ನೆರೆಹೊರೆಯವರು ಜಗಳಕ್ಕೆ ಇಳಿದಿದ್ದಾರೆ. ಮಾತಿನ ಚಕಮಕಿ ವಾಗ್ವಾದವಾಗಿ […]
ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ರುಡ್ ಸೆಟ್ ಸಂಸ್ಥೆ, ಉಜಿರೆಗೆ ಭೇಟಿ
ಉಜಿರೆ: ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಗೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ಬೆಂಗಳೂರು ಇದರ ಮುಖ್ಯ ಕಾರ್ಯಾಚರಣಾ ಅಧಿಕಾರಿ (ಕೌಶಲ್ಯ) ಕಾತ್ಯಾಯಿನಿ ದೇವಿ ಕೆ.ಎ.ಎಸ್ ಅವರು ಇಂದು ಭೇಟಿ ನೀಡಿದರು.ಭೇಟಿಯ ಸಂದರ್ಭದಲ್ಲಿ ಸಂಸ್ಥೆಯಲ್ಲಿ ನಡೆಯುತ್ತಿರುವ ಕಂಪ್ಯೂಟರ್ ಟ್ಯಾಲಿ ಹಾಗೂ ಫ್ರಿಜ್ ಮತ್ತು ಎ.ಸಿ ರಿಪೇರಿ ತರಬೇತಿಗಳನ್ನು ವೀಕ್ಷಿಸಿ, ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು. ತರಬೇತಿಯ ಗುಣಮಟ್ಟ, ಲಭ್ಯವಿರುವ ಸೌಲಭ್ಯಗಳು ಹಾಗೂ ಶಿಬಿರಾರ್ಥಿಗಳ ಅಭಿಪ್ರಾಯಗಳ ಬಗ್ಗೆ ವಿಚಾರಿಸಿದರು.ನಂತರ ಸಂಸ್ಥೆಯ ನಿರ್ದೇಶಕರು ಹಾಗೂ ಉಪನ್ಯಾಸಕರೊಂದಿಗೆ ಚರ್ಚೆ […]
ರುಡ್ ಸೆಟ್ನಲ್ಲಿ ವಿದ್ಯುತ್ ಉಪಕರಣ ಹಾಗೂ ದ್ವಿಚಕ್ರ ವಾಹನ ರಿಪೇರಿ ತರಬೇತಿ ಸಮಾರೋಪ
ಉಜಿರೆ: ರುಡ್ ಸೆಟ್ ಸಂಸ್ಥೆ, ಉಜಿರೆ ಇವರ ಆಶ್ರಯದಲ್ಲಿ ನಡೆದ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ದುರಸ್ತಿ ಹಾಗೂ ದ್ವಿಚಕ್ರ ವಾಹನಗಳ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇತ್ತೀಚೆಗೆ ನಡೆಯಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳದ ಪಾರುಪತ್ಯಗಾರರಾದ ಶ್ರಿಯುತ ಲಕ್ಷ್ಮೀ ನಾರಾಯಣ ರಾವ್ ಅವರು ಮಾತನಾಡಿ, ವೃತ್ತಿಯಲ್ಲಿ ಶಿಸ್ತು, ಸೇವಾಭಾವ ಹಾಗೂ ಪ್ರಾಮಾಣಿಕತೆಯನ್ನು ಅಳವಡಿಸಿಕೊಂಡು ಅನುಭವ ಗಳಿಸಬೇಕು ಎಂದು ಸಲಹೆ ನೀಡಿದರು. ಪೂಜ್ಯ ಖಾವಂದ ಪರಿಕಲ್ಪನೆಯ ರುಡ್ ಸೆಟ್ ಸಂಸ್ಥೆ ಕೇವಲ ತಾಂತ್ರಿಕ ತರಬೇತಿಗೆ […]
ತುಳು 2ನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಶೀಘ್ರ ಘೋಷಣೆ:
ರಾಜ್ಯದಲ್ಲಿ ತುಳು ಭಾಷೆಯನ್ನು ರಾಜ್ಯದ ೨ನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಆದಷ್ಟು ಶೀಘ್ರ ಘೋಷಣೆ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು. ವಿಧಾನಸಭೆಯಲ್ಲಿ ಕಾಂಗ್ರೆಸ್ನ ಅಶೋಕ್ ರೈ ಪ್ರಶ್ನೆಗೆ ಉತ್ತರಿಸಿದ ಸಚಿವರು, ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ನಿಟ್ಟಿನಲ್ಲಿ ಪ್ರಸ್ತಾವನೆಯನ್ನು ಚರ್ಚಿಸಲು ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ಅವರು ಹೇಳಿದರು. ತುಳು ಭಾಷೆಯ ಸ್ವರೂಪ ಮತ್ತು ಇತಿಹಾಸ, ತುಳು ಸಾಹಿತ್ಯ […]
ಮುಂದಿನ ಶೈಕ್ಷಣಿಕ ವರ್ಷಕ್ಕೆ 10 ಸಾವಿರಕ್ಕೂ ಹೆಚ್ಚು ಶಿಕ್ಷಕರ ನೇಮಕ
ಜಿಲ್ಲಾಡಳಿತ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಮುಂದಿನ ಶೈಕ್ಷಣಿಕ ವರ್ಷಕ್ಕೆ ಮುನ್ನ ರಾಜ್ಯ ಸರ್ಕಾರವು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 10,800 ಶಿಕ್ಷಕರ ನೇಮಕಾತಿ ಮಾಡುವ ಚಿಂತನೆ ನಡೆಸಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ಸೋಮವಾರ ತಿಳಿಸಿದ್ದಾರೆ.ಶಿಕ್ಷಕರ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಸರ್ಕಾರವು ಈಗಾಗಲೇ 14,499 ಪೂರ್ಣಾವಧಿ ಶಿಕ್ಷಕರನ್ನು ನೇಮಕ ಮಾಡಿದ್ದು, ಮೊದಲ ಬಾರಿಗೆ 51,000 ಅತಿಥಿ ಶಿಕ್ಷಕರನ್ನು ಸಹ ನೇಮಕ ಮಾಡಿದೆ ಎಂದು ಅವರು ಹೇಳಿದರು. ಶಿವಮೊಗ್ಗ […]
ರೋಡಲ್ಲೇ ಬಟ್ಟೆ ಬಿಚ್ಚಿ ಹೊಡಿತೀನಿ ಎಂದ ಮಾಲೀಕ; ಆರೋಪಿ ಸೈಯದ್ ಪೊಲೀಸರ ವಶಕ್ಕೆ!
ಬೆಂಗಳೂರು: ಮಹಿಳಾ ಸಿಬ್ಬಂದಿ ಮೇಲೆ ದೌರ್ಜನ್ಯವೆಸಗಿದ ಆರೋಪದ ಮೇರೆಗೆ ಸೈಬರ್ ಸೆಂಟರ್ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿ ಸೈಯದ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಕೆಂಗೇರಿಯಲ್ಲಿ ಈ ಘಟನೆ ನಡೆದಿದ್ದು, ಕಳೆದ ಐದು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಯುವತಿ ರಜೆ ಹಾಕಿದ್ದಕ್ಕೆ ಸೈಬರ್ ಸೆಂಟರ್ ಮಾಲೀಕ ಸೈಯದ್ ಸಾರ್ವಜನಿಕವಾಗಿ ಅಶ್ಲೀಲ ಪದಗಳಿಂದ ನಿಂದಿಸಿ, ಪ್ರಾಣ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಐದು ವರ್ಷದಿಂದ ಒಂದೇ ಕಡೆ ಕೆಲಸ ಮಾಡುತ್ತಿದ್ದರೂ, ಕೆಲಸಕ್ಕೆ ರಜೆ ಹಾಕಿದ ವಿಷಯಕ್ಕೆ ಸಂಬಂಧಿಸಿದಂತೆ […]
ಬ್ರಹ್ಮಾವರ ಆಭರಣ ಜ್ಯುವೆಲ್ಲರ್ಸ್ ನಿಂದ ಯೋಧರಿಗೆ ಗೌರವ ಸನ್ಮಾನ.
ಕೋಟ: ಬ್ರಹ್ಮಾವರದ ಆಭರಣ ಜ್ಯುವೆಲ್ಲರ್ಸ್ ನ ಮಳಿಗೆಯಲ್ಲಿ ಸೈನಿಕ ದಿನಾಚರಣೆಯ ಸಂಭ್ರಮದಿಂದ ಆಚರಿಸಲಾಯಿತು.ಮಳಿಗೆಯ ಪ್ರಬಂಧಕರಾದ ಗಣೇಶ್ ಪ್ರಭು ಅವರ ನೇತೃತ್ವದಲ್ಲಿ ಮಾಜಿ ಸೈನಿಕರು ದೀಪವನ್ನು ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸನ್ಮಾನ ಸ್ವೀಕರಿಸಿದ ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಂಘಟನೆಯ ಸುರೇಶ್ ಸಿ ರಾವ್ ಅವರು ಮಾತನಾಡಿ ಉಡುಪಿ ಜಿಲ್ಲೆಯ ಆಭರಣ ಜ್ಯುವೆಲ್ಲರ್ಸ್ ನವರು ಸೈನಿಕರನ್ನು ಗುರುತಿಸಿ ಅವರ ಕಾರ್ಯವನ್ನು ಗುರುತಿಸಿದ್ದು ತುಂಬಾ ವಿಶೇಷ ಸಂಗತಿಯಾಗಿದೆ. ಹಾಗೆಯೇ ದೇಶದ ರಕ್ಷಣೆಯಲ್ಲಿ ತೊಡಗಿರುವ ಎಲ್ಲಾ ಸೈನಿಕರನ್ನು ಕೂಡ […]









