ಸೆಪ್ಟೆಂಬರ್ 14ರಂದು ಗಣೇಶ ಹಬ್ಬ ನಡೆಯಲಿರುವ ಹಿನ್ನೆಲೆಯಲ್ಲಿ ಸಚಿವರು ಈ ಸೂಚನೆ ನೀಡಿದ್ದು, ಇಲಾಖೆಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ, ರಾಸಾಯನಿಕ ಬಣ್ಣ ಬಳಿದಿರುವ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್ ಮೂರ್ತಿಗಳ ವಿಸರ್ಜನೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
ಜಲಮೂಲಗಳು ಹಾಗೂ ಪರಿಸರ ಸಂರಕ್ಷಣೆಗಾಗಿ ಜನರು ಮಣ್ಣಿನ ಮೂರ್ತಿಗಳನ್ನೇ ಪೂಜಿಸುವಂತೆ ಉತ್ತೇಜಿಸಬೇಕು ಎಂದು ಅವರು ಕರೆ ನೀಡಿದ್ದಾರೆ. ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಪರಿಸರ ಸ್ನೇಹಿ ಮಣ್ಣಿನ ಗೌರಿ ಮತ್ತು ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ವಿಸರ್ಜನೆಗೆ ಮಾತ್ರ ಅವಕಾಶ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಸೂಚಿಸಿದ್ದಾರೆ.
ಪಿಒಪಿ ಮೂರ್ತಿಗಳನ್ನು ಕ್ಯಾಲ್ಸಿಯಂ ಸಲ್ಫೇಟ್ ಹೆಮಿಹೈಡ್ರೇಟ್ ಪುಡಿಯಿಂದ ತಯಾರಿಸಲಾಗುತ್ತದೆ. ಇದರಲ್ಲಿ ಸಲ್ಫರ್, ಬಣ್ಣದ್ರವ್ಯಗಳು, ಜಿಪ್ಸಮ್ ಮತ್ತು ಮೆಗ್ನೀಷಿಯಂನಂತಹ ವಸ್ತುಗಳು ಇರುತ್ತವೆ..
ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಗಣೇಶ ಹಬ್ಬ ಹತ್ತಿರವಾಗುತ್ತಿರುವಂತೆಯೇ ರಾಜ್ಯ ಸರ್ಕಾರ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಮಣ್ಣಿನ ಗಣೇಶ ಮೂರ್ತಿಗಳಿಗಷ್ಟೇ ಅವಕಾಶ ನೀಡುವ ಕುರಿತು ಖಡಕ್ ಆದೇಶ ಹೊರಡಿಸಿದೆ.
ಹೌದು.. ಕರ್ನಾಟಕದಲ್ಲಿ ಗಣೇಶೋತ್ಸವದ ವೇಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕವಾಗಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆಗೆ ಪರಿಸರ ಸ್ನೇಹಿ, ಬಣ್ಣ ಹಚ್ಚದ ಮಣ್ಣಿನ ಗಣೇಶ ಮೂರ್ತಿಗಳಿಗೆ ಮಾತ್ರ ಅವಕಾಶ ನೀಡುವಂತೆ ಅಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.
ಸೆಪ್ಟೆಂಬರ್ 14ರಂದು ಗಣೇಶ ಹಬ್ಬ ನಡೆಯಲಿರುವ ಹಿನ್ನೆಲೆಯಲ್ಲಿ ಸಚಿವರು ಈ ಸೂಚನೆ ನೀಡಿದ್ದು, ಇಲಾಖೆಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ, ರಾಸಾಯನಿಕ ಬಣ್ಣ ಬಳಿದಿರುವ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್ ಮೂರ್ತಿಗಳ ವಿಸರ್ಜನೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
ಜಲಮೂಲಗಳು ಹಾಗೂ ಪರಿಸರ ಸಂರಕ್ಷಣೆಗಾಗಿ ಜನರು ಮಣ್ಣಿನ ಮೂರ್ತಿಗಳನ್ನೇ ಪೂಜಿಸುವಂತೆ ಉತ್ತೇಜಿಸಬೇಕು ಎಂದು ಅವರು ಕರೆ ನೀಡಿದ್ದಾರೆ. ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಪರಿಸರ ಸ್ನೇಹಿ ಮಣ್ಣಿನ ಗೌರಿ ಮತ್ತು ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ವಿಸರ್ಜನೆಗೆ ಮಾತ್ರ ಅವಕಾಶ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಸೂಚಿಸಿದ್ದಾರೆ.
eco-friendly clay Ganesh idols
ಕರ್ನಾಟಕ ಹೆದ್ದಾರಿಗಳಲ್ಲಿ EV charging ಕೊರತೆ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕೇವಲ 4 ಕೇಂದ್ರಗಳಲ್ಲಷ್ಟೇ ಸೌಲಭ್ಯ..!
ಪಿಒಪಿ ಮೂರ್ತಿಗಳಿಗಿಲ್ಲ ಅವಕಾಶ
ಹಬ್ಬಕ್ಕೂ ಮುನ್ನವೇ ಪಿಒಪಿ ಗಣೇಶ ಮೂರ್ತಿಗಳ ತಯಾರಿಕೆ, ದಾಸ್ತಾನು, ಸಾಗಣೆ ಹಾಗೂ ಮಾರಾಟವನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಖಂಡ್ರೆ ನಿರ್ದೇಶನ ನೀಡಿದ್ದಾರೆ. ಹಬ್ಬದ ಸಂದರ್ಭದಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಕಾರ ಪಡೆದು, ಪಂಚಾಯಿತಿ ಮಟ್ಟದಲ್ಲಿ ಪಿಒಪಿ ಮೂರ್ತಿಗಳಿಂದಾಗುವ ಹಾನಿಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ನಡೆಸುವಂತೆಯೂ ಅವರು ಸೂಚಿಸಿದ್ದಾರೆ.
ಪರಿಸರದ ಮೇಲೆ ಗಂಭೀರ ಪರಿಣಾಮ
ಪಿಒಪಿ ಮೂರ್ತಿಗಳನ್ನು ಕ್ಯಾಲ್ಸಿಯಂ ಸಲ್ಫೇಟ್ ಹೆಮಿಹೈಡ್ರೇಟ್ ಪುಡಿಯಿಂದ ತಯಾರಿಸಲಾಗುತ್ತದೆ. ಇದರಲ್ಲಿ ಸಲ್ಫರ್, ಬಣ್ಣದ್ರವ್ಯಗಳು, ಜಿಪ್ಸಮ್ ಮತ್ತು ಮೆಗ್ನೀಷಿಯಂನಂತಹ ವಸ್ತುಗಳು ಇರುತ್ತವೆ ಎಂದು ಖಂಡ್ರೆ ತಿಳಿಸಿದ್ದಾರೆ.
ಈ ಮೂರ್ತಿಗಳಿಗೆ ಬಳಸುವ ಬಣ್ಣಗಳಲ್ಲಿ ಪಾದರಸ, ಕ್ಯಾಡ್ಮಿಯಂ ಹಾಗೂ ಸೀಸದಂತಹ ಅಪಾಯಕಾರಿ ಭಾರ ಲೋಹಗಳು ಇರುವ ಸಾಧ್ಯತೆಯಿದ್ದು, ಅವು ಪರಿಸರಕ್ಕೆ ಹಾನಿಕಾರಕವಾಗಿವೆ ಎಂದು ಅವರು ಹೇಳಿದ್ದಾರೆ.
ಕೆರೆ, ನದಿ, ಬಾವಿ ಸೇರಿದಂತೆ ಇತರ ಜಲಮೂಲಗಳಲ್ಲಿ ಪಿಒಪಿ ಮೂರ್ತಿಗಳನ್ನು ವಿಸರ್ಜಿಸಿದಾಗ ಈ ಭಾರ ಲೋಹಗಳು ನೀರಿಗೆ ಸೇರುತ್ತವೆ. ಇದರಿಂದ ಮಾನವರು ಮತ್ತು ಪ್ರಾಣಿಗಳ ಆರೋಗ್ಯಕ್ಕೆ ಅಪಾಯ ಉಂಟಾಗುವುದರ ಜೊತೆಗೆ ಜಲಚರಗಳಿಗೂ ಹಾನಿಯಾಗುತ್ತದೆ ಎಂದು ಸಚಿವರು ವಿವರಿಸಿದ್ದಾರೆ
🚨 ನಮ್ಮೆಲ್ಲಾ ಓದುಗರರಿಗೂ 80ನೇ ವರ್ಷದ ಸ್ವತಂತ್ರೋತ್ಸವದ ಶುಭಾಶಯಗಳು ಉತ್ತರಾಖಂಡದ ಚಮೋಲಿ ಜಿಲ್ಲೆಯ ಪೀಪಲ್ಕೋಟಿ ಬಳಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಯ ಸುರಂಗವೊಂದಕ್ಕೆ ದಿಢೀರನೆ ನೀರು ಹಾಗೂ ಕಸ-ಬಂಡೆಗಳ ತ್ಯಾಜ್ಯ ನುಗ್ಗಿದ ಪರಿಣಾಮ 7 ಜನ ಕಾರ್ಮಿಕರು ಮೃತಪಟ್ಟಿದ್ದಾರೆ ಹಾಗೂ 14ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಟೆಕ್ರಿ ಹೈಡೋ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ಗೆ ಸೇರಿದ ‘ವಿಷ್ಣುಗಡ-ಪೀಪಲ್ಕೋಟಿ’ ಜಲವಿದ್ಯುತ್ ಯೋಜನೆಯ ಸುರಂಗದಲ್ಲಿ ಅಗ್ರಸ್ಥಾನದ ಕಾಮಗಾರಿ ನಡೆಯುತ್ತಿದ್ದಾಗ, ಗುರುವಾರ ಸಂಜೆ ಭಾರಿ ಪ್ರಮಾಣದ ನೀರು ಮತ್ತು ಮಣ್ಣು-ಕಲ್ಲುಗಳ ಮಿಶ್ರಣ […]
ದಕ್ಷಿಣ ಕನ್ನಡ: ಸ್ವಯಂ ಉದ್ಯೋಗ ಮಾಡಬಯಸುವ ಗ್ರಾಮೀಣ ಯುವಕ-ಯುವತಿಯರಿಗಾಗಿ ಉಜಿರೆಯ ಪ್ರಸಿದ್ಧ ರುಡ್ಸೆಟ್ (RUDSET) ಸಂಸ್ಥೆಯ ಉಚಿತ ‘ಅಣಬೆ ಬೇಸಾಯ’ (Mushroom Farming) ತರಬೇತಿಯನ್ನು ಆಯೋಜಿಸಿದೆ. ಸ್ವಂತ ಉದ್ಯೋಗ ಪ್ರಾರಂಭಿಸಿ ಸ್ವಾವಲಂಬಿ ಜೀವನ ನಡೆಸಲು ಬಯಸುವ ಅಭ್ಯರ್ಥಿಗಳಿಗೆ ಈ ತರಬೇತಿಯು ಅತ್ಯುತ್ತಮ ಅವಕಾಶವಾಗಿದೆ. 📌 ತರಬೇತಿಯ ಪ್ರಮುಖ ವಿವರಗಳು: 💡 ಸಿಗುವ ಉಚಿತ ಸೌಲಭ್ಯಗಳು: 👥 ಅರ್ಹತೆ ಮತ್ತು ನಿಬಂಧನೆಗಳು: 📝 ಅರ್ಜಿ ಸಲ್ಲಿಸುವುದು ಹೇಗೆ? ಆಸಕ್ತ ಅಭ್ಯರ್ಥಿಗಳು ಕೆಳಗಿನ ಗೂಗಲ್ ಫಾರ್ಮ್ ಲಿಂಕ್ ಅಥವಾ ನೇರವಾಗಿ […]
ನಾಗೇಶ್ ಗಾಣಿಗ ಕಳೆದ ಹಲವು ವರ್ಷಗಳಿಂದ ವಿಜಯಕರ್ನಾಟಕ ವರದಿಗಾರರಾಗಿ ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ತಮ್ಮ ವರದಿಗಾರಿಕೆಯ ಮೂಲಕ ಬೆಳಕು ಚೆಲ್ಲಿದ್ದರು. ಕೃಷಿ ಕಾಯಕದ ಜೊತೆಗೆ ಪತ್ರಕರ್ತ ವೃತ್ತಿ ಮಾಡುತ್ತಿದ್ದ ನಾಗೇಶ್ ಅವಿವಾಹಿತರಾಗಿದ್ದರು. ಬುಧವಾರ ಮಧ್ಯಾಹ್ನದ ವೇಳೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ನಾಗೇಶ್ರ ಅಕಾಲಿಕ ನಿಧನಕ್ಕೆ ಉಡುಪಿ ಜಿಲ್ಲಾ ಹಾಗೂ ಕುಂದಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ, ತೀವ್ರ ಸಂತಾಪ ಸೂಚಿಸಿದ್ದಾರೆ.