
ಕರಾವಳಿ ಜಿಲ್ಲೆ ಉಡುಪಿಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಹವಾಮಾನ ಇಲಾಖೆಯು ಜಿಲ್ಲಾದ್ಯಂತ ‘ಆರೆಂಜ್ ಅಲರ್ಟ್’ ನೀಡಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಜುಲೈ 25 ರ ಶನಿವಾರದಂದು ಜಿಲ್ಲೆಯ ಪ್ರಮುಖ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.




