ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಕಾಯುತ್ತಿರುವವರಿಗೆ OC ಯಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿರುವ ಅಥವಾ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ಕಟ್ಟಡ ನಿರ್ಮಿಸಿರುವ ಪ್ರಕರಣಗಳಿಗೆ & ಯಾವುದೇ ವಿದ್ಯುತ್ ಸಂಪರ್ಕ ಪಡೆಯದೇ ಕಟ್ಟಡ ಪೂರ್ಣಗೊಂಡವರಿಗೆ ಮಾತ್ರ ಅನ್ವಯಿಸುವಂತೆ ಒಸಿ ಪ್ರಮಾಣಪತ್ರ ಪಡೆಯುವುದರಿಂದ, ವಿನಾಯಿತಿ ನೀಡಿ ಇಂಧನ ಇಲಾಖೆ ಆದೇಶಿಸಿದೆ. 15 ದಿನದೊಳಗೆ ಅರ್ಹರು ಅರ್ಜಿ ಸಲ್ಲಿಸಬಹುದು.
Like this:
Like Loading...
ಚಾಮರಾಜನಗರದಲ್ಲಿ ಕಾಡು ಪ್ರಾಣಿಗಳ ಉಪಟಳ ಮಿತಿ ಮೀರಿದ್ದು, ಕಾಡಂಚಿನ ಗ್ರಾಮಗಳ ಜನರ ಬದುಕೇ ದುಸ್ತರವಾಗಿ ಮಾರ್ಪಟ್ಟಿದೆ. ಜನವಸತಿ ಪ್ರದೇಶಗಳಿಗೆ ಮೇಲಿಂದ ಮೇಲೆ ವನ್ಯ ಜೀವಿಗಳು ಲಗ್ಗೆ ಇಡುತ್ತಿರವ ಕಾರಣಕ್ಕೆ ಜೀವ ಭಯದಲ್ಲಿಯೇ ಜನ ಬದುಕುವಂತಾಗಿದೆ. ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟದ ಆನೆಹೊಲ ಹಾಡಿಯಲ್ಲಿ ಏಕಾಏಕಿ ಚಿರತೆ ದಾಳಿ ನಡೆಸಿದ್ದು, ಕುರಿ ಮೇಯಿಸುತ್ತಿದ್ದ ಆದಿವಾಸಿ ಮಹಿಳೆ ಪವಾಡ ಎಂಬಂತೆ ಜೀವ ಉಳಿಸಿಕೊಂಡಿದ್ದಾಳೆ. ಕಳೆದ 6 ತಿಂಗಳಿಂದ ಮಲೆ ಮಹದೇಶ್ವರ ಬೆಟ್ಟದ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ನಿರಂತರವಾಗಿ ಚಿರತೆ ದಾಳಿ […]
Like this:
Like Loading...
ಅಫ್ಘಾನಿಸ್ತಾನ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ 79 ರನ್ ಗಳಿಸುವ ಮೂಲಕ ಹಲವು ದಾಖಲೆಗಳನ್ನು ಮುರಿದರು. 386 ಇನ್ನಿಂಗ್ಸ್ಗಳಲ್ಲಿ 16,137 ರನ್ ಗಳಿಸುವ ಮೂಲಕ ಅವರು ವೀರೇಂದ್ರ ಸೆಹ್ವಾಗ್ ಅವರ ದಾಖಲೆ (16,119 ರನ್) ಹಿಂದಿಕ್ಕಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಆರಂಭಿಕ ಆಟಗಾರರಾದರು. ಜೊತೆಗೆ ಭಾರತದ ಪರ ಅರ್ಧಶತಕ ಗಳಿಸಿದ ಅತ್ಯಂತ ಹಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಏಕದಿನ ಕ್ರಿಕೆಟ್ನಲ್ಲಿ 1,100 ಬೌಂಡರಿ ಬಾರಿಸಿ ಅಪರೂಪದ ಮೈಲಿಗಲ್ಲನ್ನು ತಲುಪಿದರು
Like this:
Like Loading...